Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಳಗಾವಿ: 13 ನವೆಂಬರ್ (ಫಿಕ್ರೋಖಬರ್ ಸುದ್ದಿ) ನಾಯಿಗಳು ಮಾನವನ ಅತ್ಯುತ್ತಮ ಮಿತ್ರ ಎನ್ನುವುದು ಈ ಘಟನೆಯಿಂದ ಇನ್ನೊಮ್ಮೆ ಸಾಬೀತಾಗಿದೆ. ಎರಡು ನಾಯಿಗಳು ಕರಡಿ ದಾಳಿಯಿಂದ ತಮ್ಮ ಮಾಲೀಕನನ್ನು ಕಾಪಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಖಾನಾಪುರದ ಲೋಂಡಾ ಸಮೀಪ ನಡೆದಿದೆ. ಲೋಂಡಾದ ಮೊಹಿಶೇತ್ ಗ್ರಾಮದಲ್ಲಿ ಸಂಭವಿಸಿದ ಪ್ರಕರಣದಲ್ಲಿ ಎರಡು ನಾಯಿಗಳು ತಮ್ಮ 51 ವರ್ಷದ ಮಾಲೀಕನ ಜೀವವನ್ನು ರಕ್ಷಿಸಿದೆ. ಮೊಹಿಶೇತ್ ಗ್ರಾಮದ ನಿವಾಸಿಯಾದ ಪರಶುರಾಮ ಕೀರಪ್ಪ ಮಿರಾಶಿ ಎನ್ನುವವರು ಭಾನುವಾರ ಸಂಜೆ 7.15ರ ಸುಮಾರು ತಮ್ಮ ಜಮೀನಿನಿಂದ ಮನೆಗೆ ಹಿಂತಿರುಗುತ್ತಿದ್ದರು. ಖಾನಾಪುರ ಅರಣ್ಯ ಮಾರ್ಗದ ನಡುವೆ ಸಾಗುವಾಗ ಅವರ ಮೇಲೆ ಕರಡಿಗಳು ದಾಳಿ ಮಾಡಿದೆ. ಆದರೆ ಮಿರಾಶಿ ಬಳಿಯಿದ್ದ ಎರಡು ನಾಯಿಗಳು ಕರಡಿಗಳನ್ನು ಹಿಮ್ಮೆಟ್ಟಿಸಿ ಮಾಲೀಕನನ್ನು ಸುರಕ್ಷಿತವಾಗಿ ಮನೆಗೆ ತಲುಪಲು ಸಹಾಯ ಮಾಡಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಮಿರಾಶಿ ಹತ್ತಿರದ ಮರವನ್ನೇರಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟರಲ್ಲೇ ಕರಡಿಯೊಂದು ಅವರ ಕಾಲನ್ನು ಕಚ್ಚಿ ಹಿಡಿದಿತ್ತು. ಆದರೆ ಅವರ ನಾಯಿಗಳು ಕರಡಿ ಮೇಲೆ ಆಕ್ರಮಣ ನಡೆಸಿದ್ದ ಕಾರಣ ಅವರು ದಾಳಿಯಿಂದ ತಪ್ಪಿಸಿಕೊಳ್ಳುವುದು ಸಾಧ್ಯವಾಗಿದೆ.
ನಾಯಿಗಳ ನಿರಂತರ ದಾಳಿಯು ಪ್ರಾರಂಭವಾಗಲು ಕರಡಿಗಳು ನಾಯಿಗಳನ್ನು ಅಟ್ಟಾಡಿಸಿಕೊಂಡು ಹೋದವು. ಇತ್ತ ಮರವೇರಿದ್ದ ಮಿರಾಶಿ ಹತ್ತಿರದಲ್ಲಿ ಎಲ್ಲಿಯೂ ಕರಡಿಗಳಿಲ್ಲ ಎಂದು ಅರಿವಾದಾಗ ಮರದಿಂದಿದ್ಳಿದು ಹತ್ತಿರದ ಮೈದಾನವೊಂದಕ್ಕೆ ಆಗಮಿಸಿ ಅಲ್ಲಿನ ಶೆಡ್ ಒಂದರಲ್ಲಿ ತಂಗಿದರು. ಸುಮಾರು ಅರ್ಧ ಗಂಟೆಗಳ ಬಳಿಕ ಅವರು ಶೆಡ್ ನಿಂದ ಹೊರಬಂದು ಒಂದು ದೊಡ್ಡ ಕಟ್ಟಿಗೆ ತುಂಡನ್ನು ರಕ್ಷಣೆಗಾಗಿ ಹಿಡಿದು ಸುರಕ್ಷಿತವಾಗಿ ಮನೆ ಸೇರಿದ್ದಾರೆ.
ಮಿರಾಶಿ ಮನೆ ತಲುಪಿದ ತಕ್ಷಣವೇ ಕುಟುಂಬಸ್ಥರು ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ. ತ್ಕಃಸ್ಣ ಮಿರಾಶಿ ಮನೆಗೆ ಆಗಮಿಸಿದ ಅರಣ್ಯ ಅಧಿಕಾರಿಗಳ ತಂಡ ಅವರನ್ನು ಲೋಂಡಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದೆ. ಮಿರಾಶಿ ಪರೀಕ್ಷೆ ನಡೆಸಿದ ವೈದ್ಯರು ಅವರು ಆರೋಗ್ಯದಿಂದಿದ್ದಾರೆ ಎಂದು ತಿಳಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |