Urdu   /   English   /   Nawayathi

ಸಿಲಿಂಡರ್ ಲಾರಿ ಸ್ಪೋಟಗೊಂಡು ಸ್ಥಳದಲ್ಲೇ ಚಾಲಕ ಸಜೀವ ದಹನ

share with us

ಸಾಗರ: 15 ನವೆಂಬರ್ (ಫಿಕ್ರೋಖಬರ್ ಸುದ್ದಿ) ಶಿವಮೊಗ್ಗ ಜೆಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದ ಮಧ್ಯೆ ಮುಂಡಿಗೆಹಳ್ಳ ಎಂಬಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಸ್ಪೋಟಗೊಂಡ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಸುಮಾರು 4:30ಗಂಟೆಗೆ ಸಾಗರದಿಂದ ಕಾರ್ಗಲ್ ಕಡೆಗೆ ಇಂಡೇನ್ ಗ್ಯಾಸ್ ಸಿಲಿಂಡರ್‍ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸುಮಾರು ಇಪ್ಪತ್ತಕ್ಕೂ ಹೆಚ್ಚು ಸಿಲಿಂಡರ್‍ಗಳು ಸ್ಪೋಟಗೊಂಡು ಈ ಘಟನೆ ನಡೆದಿದೆ. ಸ್ಪೋಟದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾನೆ ಎಂದು ಪ್ರತ್ರಕ್ಷದರ್ಶಿಗಳು ತಿಳಿಸಿದ್ದಾರೆ. ಮೃತಪಟ್ಟ ಲಾರಿ ಚಾಲಕ ಭದ್ರಾವತಿ ಮಾವಿನಕಟ್ಟೆಯ ನಿವಾಸಿ ಕೃಷ್ಣಮೂರ್ತಿ ಎಂದು ಹೇಳಲಾಗಿದೆ.  ವಾಹನದ ನಂಬರ್ ಪ್ಲೇಟ್ ಸಹ ಸುಟ್ಟು ಬೂದಿಯಾದ ಕಾರಣ ವಾಹನ ಯಾರದು? ವಾಹನದಲ್ಲಿ ಎಷ್ಟು ಜನರಿದ್ದರು ಎಂದು ತಿಳಿದು ಬಂದಿಲ್ಲ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕದಳದವರು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا