Urdu   /   English   /   Nawayathi

ಇಮ್ರಾನ್ ಖಾನ್ ಪದಗ್ರಹಣ ಸಮಾರಂಭಕ್ಕೆ ಆಮಂತ್ರಿಸದ ಕಾರಣ ನನ್ನ ಮೇಲೆ ಮೋದಿಗೆ ಅಸೂಯೆ- ಸಿಧು

share with us

ರಾಯ್ ಪುರ: 17 ನವೆಂಬರ್ (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್  ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಮಂತ್ರಿಸದ ಕಾರಣ ನನ್ನ ಮೇಲೆ  ಪ್ರಧಾನಿ ನರೇಂದ್ರ ಮೋದಿಗೆ ಅಸೂಯೆ ಇದೆ ಎಂದು ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಚಂಡೀಗಢದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಧು, ನವಾಜ್ ಷರೀಫ್ ಹುಟ್ಟುಹಬ್ಬಕ್ಕೆ ಆಹ್ವಾನ ನೀಡದಿದ್ದರೂ ಹೋಗುವ ನರೇಂದ್ರ ಮೋದಿಗೆ ಇಮ್ರಾನ್ ಖಾನ್ ಪದ ಗ್ರಹಣ ಸಮಾರಂಭಕ್ಕೆ ಆಹ್ವಾನ ನೀಡದಿದ್ದಕ್ಕೆ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಗೋದ್ರಾ ಹತ್ಯಾಕಾಂಡದಲ್ಲಿ ತಳಕು ಹಾಕಿಕೊಂಡಿರುವ ಜನರಿಗೆ ನನ್ನ ದೇಶಭಕ್ತಿಯನ್ನು ಸಾಬೀತುಪಡಿಸುವುದಿಲ್ಲ ಎಂದು ಹೇಳಿದ ಸಿಧು, ಸರ್ಕಾರದ ವಿರುದ್ಧ ಪ್ರಶ್ನೆ ಕೇಳುವವರಿಗೆ ರಾಷ್ಟ್ರ ವಿರೋಧಿ ಎಂಬ ಹಣೆಪಟ್ಟಿ ಕಟ್ಟುವ ಮೂಲಕ  ಅವರ ಧ್ವನಿ ಅಡಗಿಸಲಾಗುತ್ತಿದೆ ಎಂದು ಕೇಂದ್ರಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವರ್ಷದ ಆಗಸ್ಟ್ ತಿಂಗಳಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಪದಗ್ರಹಣ ಸ್ವೀಕಾರ ಸಮಾರಂಭದಲ್ಲಿ ನವಜೋತ್ ಸಿಧು ಪಾಲ್ಗೊಂಡಿದಲ್ಲದೇ, ಪಾಕಿಸ್ತಾನದ ಜನರಲ್ ಜಾವೇದ್ ಬಾಜ್ವಾ ಅವರನ್ನು ತಬ್ಬಿಕೊಳ್ಳುವ ಮೂಲಕ ದೇಶಾದ್ಯಂತ ಟೀಕೆಗೆ ಸಿಧು ಗುರಿಯಾಗಿದ್ದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا