Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹೊಸದಿಲ್ಲಿ: 22 ನವೆಂಬರ್ (ಫಿಕ್ರೋಖಬರ್ ಸುದ್ದಿ) ಗುರುಗ್ರಾಮ್ ಸೆಕ್ಟರ್ 66 ರಲ್ಲಿ ಮೂರು ವರ್ಷದ ಬಾಲಕಿಯ ರೇಪ್ ಮತ್ತು ಹತ್ಯೆ ನಡೆದ ಬಳಿಕ ರಾಕ್ಷಸ ರೂಪದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ 20 ರ ಹರೆಯದ ಸುನೀಲ್ ಕುಮಾರ್ ಎನ್ನುವ ವಿಕೃತ ಶಿಶುಕಾಮಿಯಾಗಿದ್ದು, ಮೂರರಿಂದ 7 ವರ್ಷದೊಳಗಿನ 9 ಮಂದಿ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಾರೆ. ಗುರುಗ್ರಾಮದಲ್ಲಿ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಗುಪ್ತಾಂಗಕ್ಕೆ ಮರದ ಕೋಲನ್ನು ಇರಿದು, ಇಟ್ಟಿಗೆಯಿಂದ ತಲೆ ಒಡೆದು ಮೃಗೀಯವಾಗಿ ವರ್ತಿಸಿ ಭೀಕರವಾಗಿ ಹತ್ಯೆಗೈದಿದ್ದ.ಬಾಲಕಿಯ ಶವ ದೇಹದ ತುಂಬೆಲ್ಲಾ ಗಾಯಗಳಿಂದ ಕೂಡಿದ್ದು, ಪ್ಲಾಸ್ಟಿಕ್ ಮುಚ್ಚಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂರು ರಾಜ್ಯಗಳಲ್ಲಿ ಈತನಿಗಾಗಿ ವ್ಯಾಪಕ ಶೋಧ ನಡೆಸಿದ್ದರು. ರಾಕ್ಷಸಿ ಕೃತ್ಯ ಎಸಗುತ್ತಿದ್ದ ಸುನೀಲ್ ಕುಮಾರ್ ಅತ್ಯಾಚಾರ ಎಸಗುವ ಮುನ್ನ ಮಕ್ಕಳ ಕಾಲನ್ನು ಮುರಿಯುತ್ತಿದ್ದ ಎನ್ನುವ ಬೆಚ್ಚಿ ಬೀಳುವ ವಿಚಾರವನ್ನು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ದೆಹಲಿಯಲ್ಲಿ 4, ಗುರುಗ್ರಾಮ್ನಲ್ಲಿ 3, ಝಾನ್ಸಿ ಮತ್ತು ಗ್ವಾಲಿಯರ್ನಲ್ಲಿ ತಲಾ 1 ಕೇಸು ದಾಖಲಾಗಿದೆ. ನಿರುದ್ಯೋಗಿಯಾಗಿದ್ದ ಈತ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಪುಟ್ಟ ಬಾಲಕಿಯರಿಗೆ ಚಾಕಲೇಟು ಮತ್ತು ಸಿಹಿ ತಿಂಡಿಗಳ ಆಮಿಷ ನೀಡಿ ಅಪಹರಿಸಿ ಕೃತ್ಯ ಎಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುಗ್ರಾಮ್ನಲ್ಲಿ ನೆವೆಂಬರ್ 11 ರಂದು ಇದೇ ರೀತಿ ಬಾಲಕಿಗೆ ಚಾಕಲೇಟ್ ಆಮಿಷ ನೀಡಿ ಸ್ಲಂಗೆ ಎಳೆದೊಯ್ದು ಕೋಣೆಯೊಂದರಲ್ಲಿ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆಗೈದಿದ್ದ. ಗುರುಗ್ರಾಮಕ್ಕೆ ತಾಯಿ ಮತ್ತು ಸಹೋದರಿಯನ್ನು ಭೇಟಿಯಾಗಲು ಬಂದಿದ್ದ ವೇಳೆ ಕೃತ್ಯ ಎಸಗಿ ಹುಟ್ಟೂರಾದ ಝಾನ್ಸಿಗೆ ಪರಾರಿಯಾಗಿದ್ದ. ಬಂಧನದ ಬಳಿಕ ಸುನೀಲ್ ಕುಮಾರ್ಗೆ ಕೋರ್ಟ್ 8 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈಗಾಗಲೆ 3 ಬಾಲಕಿಯರ ಹತ್ಯೆ ಕೇಸ್ಗಳನ್ನು ಈತನ ಮೇಲೆ ಲಿಂಕ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ಸಂಬಂಧಿಸಿ ತನಿಖೆ ಮುಂದುವರಿದಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |