Urdu   /   English   /   Nawayathi

ದೆಹಲಿ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ಲಕ್ಷಕ್ಕೂ ಅಧಿಕ ರೈತರಿಂದ ಬೃಹತ್ ಪ್ರತಿಭಟನೆ

share with us

ನವದೆಹಲಿ: 29 ನವೆಂಬರ್ (ಫಿಕ್ರೋಖಬರ್ ಸುದ್ದಿ) ಸ್ವಾಮಿನಾಥನ್ ಸಮಿತಿ ವರದಿ ಜಾರಿ, ರೈತರ ಸಾಲ ಮನ್ನಾ ಮತ್ತು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ  ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 200ಕ್ಕೂ ಹೆಚ್ಚು ರೈತ ಸಂಘಟನೆಗಳ ಒಂದು ಲಕ್ಷಕ್ಕೂ ಅಧಿಕ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್ ಸಿಸಿ) ಎರಡು ದಿನಗಳ ಕಾಲ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನಾನಿರತ ರೈತರು ದೆಹಲಿ, ಹಸ್ರತ್ ನಿಜಾಮುದ್ದೀನ್, ಬಿಜ್ವಾಸನ್, ಸಬ್ಜಿ ಮಂಡಿ ನಿಲ್ದಾಣ, ಎಎನ್ ವಿಟಿ ನಿಲ್ದಾಣ ಮತ್ತು ಮಂಜು ಕ ಟಿಕ್ಲಾದಿಂದ ರಾಮ್ ಲೀಲಾ ಮೈದಾನದವರೆಗೆ ಸಾಗಲಿದ್ದಾರೆ.

ಕಳೆದ ಎರಡು ತಿಂಗಳಿನಿಂದ ರೈತರು ದೇಶದ ಹಲವು ಭಾಗಗಳಲ್ಲಿ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಹರ್ಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿನ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ನಂತರ ಅದು ಪ್ರತಿಭಟನೆಗೆ ತಿರುಗಿತು. ಮುಂಬೈಯ ಆಜಾದ್ ಮೈದಾನದಲ್ಲಿ ಕಳೆದ 22ರಂದು ಲೋಕ ಸಂಘರ್ಷ ಮೋರ್ಚ ಮುಂಬೈಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸಿದ್ದರು. ಜಮೀನಿನ ಒಡೆತನ ಮತ್ತು ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಒತ್ತಾಯಿಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا