Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 29 ನವೆಂಬರ್ (ಫಿಕ್ರೋಖಬರ್ ಸುದ್ದಿ) ಪೇಯಿಂಗ್ ಗೆಸ್ಟ್ ನಲ್ಲಿ ಕಳೆದ ಶನಿವಾರ ವಕೀಲೆ ವೃತ್ತಿ ಅಭ್ಯಾಸ ಮಾಡುತ್ತಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ವಕೀಲರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ಕಿರುಕುಳ ದೂರನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಿರುವ ಆಡಿಯೊ ಇದೀಗ ವೈರಲ್ ಆಗಿದೆ. ಕಾನೂನು ಅಭ್ಯಾಸ ಮಾಡುತ್ತಿದ್ದ ಯುವತಿ ಮತ್ತು ಕೀರ್ತಿ ಎನ್ನುವ ವ್ಯಕ್ತಿಯ ನಡುವೆ ನಡೆದ ಸಂಭಾಷಣೆ ಆಡಿಯೊ ವೈರಲ್ ಆಗಿದ್ದು ಈ ಸಂಬಂಧ ಪೊಲೀಸರು ಇಬ್ಬರು ಅಡ್ವೊಕೇಟ್ ಗಳಾದ ಚಂದ್ರ ನಾಯಕ್ ಟಿ ಮತ್ತು ಚೇತನ್ ದೇಸಾಯಿ ಎಂಬುವವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನಡೆಸಿದ ಕೇಸು ದಾಖಲಿಸಿದ್ದಾರೆ.
ಯುವತಿಯ ಸಾವಿಗೆ ನಿಖರ ಕಾರಣ ತಿಳಿಯಲು ಪೊಲೀಸರು ಶವಪರೀಕ್ಷೆ ವರದಿಗೆ ಎದುರು ನೋಡುತ್ತಿದ್ದಾರೆ. ನಡೆದ ಘಟನೆಯೇನು: ಕಳೆದ ನವೆಂಬರ್ 20ರಂದು ಪುಷ್ಪಾ ಅರ್ಚನ ಲಾಲ್(26 ವ) ತನ್ನ ಮಾರ್ಗದರ್ಶಕ ಚಂದ್ರಾ ನಾಯಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಳು. ಚಂದ್ರ ನಾಯಕ್ ಜಯಂತ್ ಪಟ್ಟಣಶೆಟ್ಟಿ ಮತ್ತು ಅಸೋಸಿಯೇಟ್ ನಡೆಸುತ್ತಿದ್ದಾರೆ. ಚಂದ್ರ ನಾಯಕ್ ಗೆ ಆಪ್ತವಾಗಿರುವ ಕೀರ್ತಿ ಎನ್ನುವ ವ್ಯಕ್ತಿ ಪುಷ್ಪಾ ಜೊತೆ ಮಾತನಾಡಿ ತನ್ನ ಮಾಲೀಕರ ವಿರುದ್ಧ ದೂರು ನೀಡದಂತೆ ಬೆದರಿಕೆ ಹಾಕುವ ವಿಡಿಯೊ ಹೊರಬಿದ್ದಿದೆ. ಪುಷ್ಪಾ ಕೇಸು ದಾಖಲಿಸಿದ ಕೂಡಲೇ ತನಗೆ ದೂರನ್ನು ಹಿಂಪಡೆಯುವಂತೆ ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿಕೊಂಡಿದ್ದಳು.
ಆಡಿಯೊ ಕ್ಲಿಪ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಲಭ್ಯವಾಗಿದ್ದು, ಅದರಲ್ಲಿ ಚಂದ್ರ ನಾಯಕ್ ಕೃತ್ಯದಿಂದ ತಾವು ತೀರ ನೊಂದಿರುವುದಾಗಿ ಹೇಳಿಕೊಂಡಿದ್ದಾಳೆ. ನಂತರ ಅದರಲ್ಲಿ ಕೀರ್ತಿ ಮತ್ತೊಬ್ಬ ಗೌಡ ಎಂಬವನನ್ನು ಪ್ರಸ್ತಾಪಿಸಿದ್ದು ಇಬ್ಬರೂ ಬೆಂಗಳೂರಿನಲ್ಲಿ ಭೇಟಿ ಮಾಡಿ ಎರಡೂ ಕಡೆಯವರು ಕ್ಷಮೆ ಕೇಳಿ ರಾಜಿ ಮಾಡಿಕೊಳ್ಳೋಣ ಎಂದು ಹೇಳಿಕೊಂಡಿರುವುದು ಆಡಿಯೊದಲ್ಲಿದೆ. ಈ ಬಗ್ಗೆ ತನಿಖಾಧಿಕಾರಿಗಳು ಆಡಿಯೊ ಕ್ಲಿಪ್ ವೈರಲ್ ಆಗಿದ್ದು ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೂ ಅದು ಪುಷ್ಪನ ಧ್ವನಿಯೇ ಆಕೆಯ ಮೊಬೈಲ್ ನಿಂದ ಕರೆ ಮಾಡಿದ್ದೇ ಎಂದು ಪೊಲೀಸರು ತನಿಖೆ ನಡೆಸಲಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |