Urdu   /   English   /   Nawayathi

ಕದ್ರಾ ಹೊಳೆಯಲ್ಲಿ ಈಜುತ್ತಿದ್ದ ವಿದ್ಯಾರ್ಥಿಯೊಬ್ಬನ ಸಾವು

share with us

ಕಾರವಾರ: 02 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ತಾಲೂಕಿನ ಕದ್ರಾ ವ್ಯಾಪ್ತಿಯ ಗೋಯರ್ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ಯುವಕ ಕಾರವಾರದ ಸೆಂಟ್ ಜೋಸೆಫ್ ಪಿ,ಯುಕಾಲೇಜಿನ ವಿದ್ಯಾರ್ಥಿ ವಿಶಾಲ್ ಮಾಂಜ್ರೇಕರ್(18) ಎಂದು ಹೇಳಲಾಗಿದೆ. ಕಾಲೇಜು ರಜೆಯ ಪ್ರಯುಕ್ತ ಕಾಲೇಜಿನ ಸುಮಾರು 20 ವಿದ್ಯಾರ್ಥಿಗಳು ಕದ್ರಾದಲ್ಲಿರುವ ಗೋಯರ್ ಹೊಳೆಗೆ ಪ್ರವಾಸಕ್ಕೆಂದು ಹೋಗಿದ್ದು, ಅವರಲ್ಲಿ ಇಬ್ಬರು ವಿದ್ಯಾರ್ಥಿಗಳು ಈಜುವಾಗ ವಿಶಾಲ್ ಏಕಾಏಕಿ ನೀರಿನಲ್ಲಿ ಮುಳುಗುವುದನ್ನು ಕಂಡ ಉಳಿದ ವಿದ್ಯಾರ್ಥಿಗಳು ಗಾಬರಿಗೊಂಡು ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಪೋಲೀಸರು ಕೆಲವು ಗಂಟೆಗಳ ಕಾಲ ನೀರಿನಲ್ಲಿ ಶೋಧನೆ ನಡೆಸಿ ಕೊನೆಗೆ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಪ್ರಕರಣ ಕದ್ರಾ ಪೋಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡಿದ್ದಾರೆ. 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا