Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 06 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಅಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಪರಿಹಾರಗಳ ಅಗತ್ಯವಿರುತ್ತದೆ ಎಂದು ಕೇಂದ್ರ ಜಾಗೃತ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿದೆ. ಸಿಬಿಐ ನಿರ್ದೇಶಕ ಸ್ಥಾನದಿಂದ ರಜೆ ಮೇಲೆ ಕಳುಹಿಸಿರುವ ಕೇಂದ್ರಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೊಕ್ ವರ್ಮಾ ಸುಪ್ರೀಂಕೋರ್ಟ್ ನಲ್ಲಿ ದಾಖಲಿಸಿರುವ ಅರ್ಜಿ ವಿಚಾರಣೆ ವೇಳೆಯಲ್ಲಿ ಸಿವಿಸಿ ಈ ರೀತಿ ಅಭಿಪ್ರಾಯಪಟ್ಟಿದೆ. ಸಿವಿಸಿ ಪರವಾಗಿ ವಿಷಯ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಿಬಿಐ ಆಡಳಿತ ಕಾನೂನು ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ವಿವರಣೆ ನೀಡುತ್ತಾ, ಸಿಬಿಐ ಮೇಲಿನ ಕೇಂದ್ರ ಜಾಗೃತ ಆಯೋಗದ ಉಸ್ತುವಾರಿ ಆಚ್ಚರಿ ಹಾಗೂ ಅಸಾಮಾನ್ಯ ಸಂದರ್ಭವನ್ನು ಒಳಗೊಂಡಿದೆ ಎಂದು ಹೇಳಿದರು.
ತನಿಖಾ ಸಂಸ್ಥೆಗಳ ಹಿತದೃಷ್ಟಿಯಿಂದ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್ ಅವರಿಗೆ ಸೂಚನೆ ನೀಡಿತು. ಇದು ಸಿಬಿಐ ನಿರ್ದೇಶಕರ ಹಾಗೂ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ನಡುವಿನ ರಾತ್ರೋ ರಾತ್ರಿ ಉಂಟಾದ ಹೋರಾಟವಲ್ಲಾ, ಆಯ್ಕೆ ಸಮಿತಿಯೊಂದಿಗೆ ಸರ್ಕಾರ ಸಮಾಲೋಚನೆ ನಡೆಸದೆ ಬಲವಂತದಿಂದ ಸಿಬಿಐ ನಿರ್ದೇಶಕರನ್ನು ಅಧಿಕಾರದಿಂದ ವಜಾಗೊಳಿಸಲಾಗಿದೆ ಎಂದು ಉನ್ನತ ನ್ಯಾಯಾಲಯ ಹೇಳಿದೆ. ಸಿಬಿಐ ನಿರ್ದೇಶಕರನ್ನು ಅಧಿಕಾರದಿಂದ ವಜಾಗೊಳಿಸುವಾಗ ಆಯ್ಕೆ ಸಮಿತಿ ಮುಂದೆ ಸಮಾಲೋಚಿಸಿದ್ದರೆ ಸರ್ಕಾರಕ್ಕೆ ಏನು ತೊಂದರೆಯಾಗುತಿತ್ತು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದ್ದು, ಸರ್ಕಾರ ಪ್ರಾಮಾಣಿಕತೆಯಿಂದ ಕೂಡಿರಬೇಕಾಗುತ್ತದೆ. ಪ್ರತಿಯೊಂದು ಸರ್ಕಾರವೂ ಉತ್ತಮ ಕ್ರಮವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ ಎಂದು ಸೂಚನೆ ನೀಡಿದೆ. ಸಿಬಿಐನ ಉನ್ನತ ಅಧಿಕಾರಿಗಳ ಬೇರೆ ಪ್ರಕರಣಗಳ ತನಿಖೆ ನಡೆಸದೆ ತಮ್ಮಿಬ್ಬರ ನಡುವಿನ ಪ್ರಕರಣಗಳ ಬಗ್ಗೆ ತನಿಖೆ ಮಾಡಿಕೊಳ್ಳುತ್ತಿದ್ದಾರೆ. ಸಿವಿಸಿ ತನಿಖೆ ಆರಂಭಿಸಿದೆ ಆದರೆ, ವರ್ಮಾ ಒಂದು ತಿಂಗಳಿನಿಂದಲೂ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ನ್ಯಾಯಾಲಯದ ಮುಂದೆ ಮೆಹ್ತಾ ಹೇಳಿದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |