Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮೈಸೂರು: 15 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ರೈಲು ಕಂಬಿ ತಡೆಗೋಡೆಗೆ ಸಿಲುಕಿ ಗಂಡಾನೆಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹುಣಸೂರಿನ ವೀರನಹೊಸಹಳ್ಳಿ ಬಳಿ ಶನಿವಾರ ನಡೆದಿದೆ. ಗ್ರಾಮಸ್ಥರು ಮೂರು ಕಾಡಾನೆಗಳನ್ನು ಕಾಡಿಗೆ ಅಟ್ಟುತ್ತಿದ್ದ ವೇಳೆ 42 ವರ್ಷ ಪ್ರಾಯದ ಗಂಡಾನೆ ರೈಲು ಕಂಬಿ ತಡೆಗೊಡೆ ಹಾರಲು ಯತ್ನಿಸಿ ಸಾವನ್ನಪ್ಪಿದೆ. ವೀರನಹೊಸಳ್ಳಿ ಗ್ರಾಮವು ಅರಣ್ಯ ಅಂಚಿನಲ್ಲಿ ಇರುವುದರಿಂದ ಈ ಭಾಗದಲ್ಲಿ ಆನೆಗಳು ಓಡಾಡುವುದು ಸಹಜ. ಆದರಿಂದ ಅರಣ್ಯ ಇಲಾಖೆಯವರು ಆನೆಗಳು ಊರಿನೊಳಗೆ ಬಾರಬಾರದು ಎಂದು ಅರಣ್ಯದ ಸುತ್ತಲು ಕಬ್ಬಿಣದ ಕಂಬಿಗಳನ್ನು ಹಾಕಿದ್ದರು. ಆದರೆ ಇಂದು ಬೆಳಗಿನ ಜಾವ ಗಂಡಾನೆಯೊಂದು ಕಬ್ಬಿಣದ ಕಂಬಿಗಳನ್ನು ದಾಟಲು ಪ್ರಯತ್ನಿಸಿದೆ. ಈ ವೇಳೆ ಆನೆಯ ಎರಡು ಕಾಲುಗಳು ಕಂಬಿಗಳ ನಡುವೆ ಸಿಲುಕಿದೆ.
ಕಂಬಿಗಳ ನಡುವಿನಿಂದ ಕಾಲನ್ನು ಬಿಡಿಸಿಕೊಳ್ಳಲು ಆನೆಯು ಬಹಳಷ್ಟು ಕಷ್ಟ ಪಟ್ಟು, ಬಳಿಕ ಬಿಡಿಸಿಕೊಳ್ಳಲಾಗದೇ ನರಳಿ, ನರಳಿ ಸ್ಥಳದಲ್ಲೇ ಮೃತಪಟ್ಟಿದೆ. ಈ ಪ್ರದೇಶದಲ್ಲಿ ಊರಿನ ಜನರು ಹೆಚ್ಚಾಗಿ ಓಡಾಡುವುದಿಲ್ಲ. ಆದರಿಂದ ಆನೆಯು ಕಂಬಿಗಳ ನಡುವೆ ಸಿಲುಕಿದ್ದ ಸಂಗತಿ ಯಾರ ಗಮನಕ್ಕೂ ಬಂದಿರಲಿಲ್ಲ. ಈ ಘಟನೆ ನಡೆದ ಬಹಳ ಸಮಯದ ಬಳಿಕ ಅದೇ ದಾರಿಯಲ್ಲಿ ಹೋಗುತ್ತಿದ್ದ ಸ್ಥಳೀಯರೊಬ್ಬರು ಆನೆ ಮೃತಪಟ್ಟಿರುವುದನ್ನು ಕಂಡು ಅರಣ್ಯ ಇಲಾಖೆಯವರಿಗೆ ಮಾಹಿತಿ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಗ್ರಾಮಸ್ಥರ ಸಹಾಯದಿಂದ ಆನೆಯ ಮೃತದೇಹವನ್ನು ಕಂಬಿಗಳಿಂದ ಬಿಡಿಸಿದ್ದಾರೆ. ಮೃತ ಆನೆ ಪುಂಡಾನೆ ಎಂದು ಅರಣ್ಯ ಸಿಬಂದಿಗಳು ತಿಳಿಸಿದ್ದು, ಈ ಹಿಂದೆ ಕಾರ್ಯಾಚರಣೆ ನಡೆಸಿದ್ದಾಗ ತಪ್ಪಿಸಿಕೊಂಡಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |