Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 16 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ)ಸಂಚಾರಕ್ಕೆ ನಿರ್ಬಂಧವಿದ್ದರೂ ಮೇಲ್ಸೇತುವೆಯಲ್ಲಿ ಬಸ್ ಚಲಾಯಿಸಿಕೊಂಡು ಹೊರಟಿದ್ದ ಚಾಲಕನ ಮೇಲೆ ಕೋಪಗೊಂಡ ಎಎಸ್ಐಯೊಬ್ಬರು, ಬಸ್ಸಿಗೆ ಹೆಲ್ಮೆಟ್ ಎಸೆದು ಕಿಟಕಿಯ ಗಾಜು ಒಡೆದಿದ್ದಾರೆ. ಗಾಜು ಒಡೆದಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಬಸ್ಸಿನ ಚಾಲಕ, ‘ನಿಯಮ ಉಲ್ಲಂಘನೆಯಾಗಿದ್ದರೆ ದಂಡ ವಿಧಿಸಬೇಕಿತ್ತು. ಅದನ್ನು ಬಿಟ್ಟು ಗಾಜು ಒಡೆದಿರುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದ್ದಾರೆ. ಆಗಿದ್ದೇನು?: ಚನ್ನಪಟ್ಟಣ ಡಿಪೊಕ್ಕೆ ಸೇರಿದ್ದ ಬಸ್ ಡಿ. 11ರಂದು ಕಲಾಸಿಪಾಳ್ಯ ನಿಲ್ದಾಣದತ್ತ ಹೋಗುತ್ತಿತ್ತು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಲ್ಕ್ಬೋರ್ಡ್ ಸಮೀಪದ ಅಂಡರ್ಪಾಸ್ ಬಳಿ ದಟ್ಟಣೆ ಹೆಚ್ಚಿದ್ದ ಕಾರಣ ಚಾಲಕ, ಅಂಡರ್ಪಾಸ್ ಬದಲು ಮೇಲ್ಸೇತುವೆ ಮೇಲೆ ಬಸ್ ಚಲಾಯಿಸಿಕೊಂಡು ಹೋಗಲು ಮುಂದಾಗಿದ್ದರು. ಅದೇ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಮಡಿವಾಳ ಸಂಚಾರ ಠಾಣೆಯ ಎಎಸ್ಐ ಗಿರಿಯಪ್ಪ, ಬಸ್ ನಿಲ್ಲಿಸುವಂತೆ ಕೈ ಮಾಡಿದ್ದರು. ಹಿಂದೆ ವಾಹನಗಳು ಬರುತ್ತಿದ್ದರಿಂದಾಗಿ, ಮುಂದಕ್ಕೆ ಹೋಗಿ ಬಸ್ ನಿಲ್ಲಿಸಲು ಚಾಲಕ ಮುಂದಾಗಿದ್ದರು. ಬಸ್ಸಿನ ಹಿಂದೆಯೇ ಓಡಿದ್ದ ಎಎಸ್ಐ, ಚಾಲಕನ ಸೀಟಿನ ಕಿಟಕಿಗೆ ಹೆಲ್ಮೆಟ್ ಎಸೆದಿದ್ದರು. ಆಗ ಗಾಜು ಒಡೆದಿತ್ತು. ಬಸ್ ನಿಲ್ಲಿಸಿ ಕೆಳಗೆ ಇಳಿದ ಚಾಲಕ, ಎಎಸ್ಐ ವರ್ತನೆಯನ್ನು ಪ್ರಶ್ನಿಸಿದ್ದರು.
‘ಮೇಲ್ಸೇತುವೆಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ನಿರ್ಬಂಧಿಸಲಾಗಿದೆ. ಅಷ್ಟಾದರೂ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದಿಯಾ. ಕೈ ಮಾಡಿದರೂ ನಿಲ್ಲಿಸಿಲ್ಲ. ಹೀಗಾಗಿಯೇ ಹೆಲ್ಮೆಟ್ ಎಸೆದೆ. ಬೇಕಾದರೆ, ನನ್ನ ವಿರುದ್ಧ ಠಾಣೆಗೆ ದೂರು ಕೊಡು’ ಎಂದು ಎಎಸ್ಐ ಮರು ಉತ್ತರಿಸಿದ್ದರು. ಆಗ ಪರಸ್ಪರ ಮಾತಿನ ಚಕಮಕಿ ಶುರುವಾಗಿತ್ತು.
ಮಧ್ಯಪ್ರವೇಶಿಸಿದ್ದ ಪ್ರಯಾಣಿಕರು, ಪರಿಸ್ಥಿತಿ ತಿಳಿಗೊಳಿಸಿದ್ದರು.
ಡಿಸಿಪಿ (ಸಂಚಾರ) ಜಗದೀಶ್, ಎಎಸ್ಐ ಗಿರಿಯಪ್ಪ ಅವರನ್ನು ಕಚೇರಿಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |