Urdu   /   English   /   Nawayathi

ಅಡಿಕೆ ಚೀಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಾಗವಾನಿ ಮರದ ದಿಮ್ಮಿಗಳ ವಶ

share with us

ಉಪ್ಪಿನಂಗಡಿ: 16 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಶುಕ್ರವಾರದಂದು ತಡ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆಯ ಬಳಿ ಅರಣ್ಯಾಧಿಕಾರಿಗಳು ಅಕ್ರಮವಾಗಿ ಸಾಗವಾನಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಆರೋಪಿಗಳು ಅಕ್ರಮವಾಗಿ ಐದು ಸಾಗವಾನಿ ಮರದ ದಿಮ್ಮಿಗಳನ್ನು ಅಡಿಕೆ ಸಿಪ್ಪೆಯ ಚೀಲಗಳಲ್ಲಿ ತುಂಬಿಕೊಂಡು ಸಾಗಿಸುವ ವೇಳೆ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿದ ಉಪ್ಪಿನಂಗಡಿಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕೃತ್ಯಕ್ಕೆ ಬಳಸಿದ ಜೀಪಿನೊಂದಿಗೆ ಮೂರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳು ಶೀನಪ್ಪ ಗೌಡ, ಸಾಂತಪ್ಪ ಗೌಡ ಹಾಗೂ ಮೋಹನ್ ದಾಸ್ ಎಂದು ಗುರುತಿಸಲಾಗಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا