Urdu   /   English   /   Nawayathi

ಗುಜರಾತ್​​, ಮುಜಾಫರ್ ​​ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೇಜ್ರಿವಾಲ್

share with us

ನವದೆಹಲಿ: 18 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಸ್ವಾಗತಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅದೇ ರೀತಿ ಗುಜರಾತ್​​, ಮುಜಾಫರ್ ​​ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದು ಮಂಗಳವಾರ ಒತ್ತಾಯಿಸಿದ್ದಾರೆ. ಇಂದು ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ದೆಹಲಿ ಸಿಎಂ, ಸಜ್ಜನ್ ಕುಮಾರ್ ಗೆ ಶಿಕ್ಷೆಯಾಗಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಅಪರಾಧಿಗೆ  ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಸಿಖ್ ಹತ್ಯಾಕಾಂಡದ ಹಾಗೆಯೇ ಗುಜರಾತ್ ಗಲಭೆ ಮತ್ತು ಮುಜಾಫರ್ ​​ನಗರ ಗಲಭೆಯಲ್ಲಿ ಭಾಗಿಯಾಗಿರುವ ದೊಡ್ಡ ದೊಡ್ಡ ನಾಯಕರಿಗೂ ಜೀವಾವಧಿ ಶಿಕ್ಷೆಯಾಗಲಿ. ಇದಕ್ಕೆ ನ್ಯಾಯಾಂಗ ಮುಂದಾಗಬೇಕು ಎಂದಿದ್ದಾರೆ.

34 ವರ್ಷಗಳ ಬಳಿಕ ಸಿಖ್ ಸಮುದಾಯಕ್ಕೆ ನ್ಯಾಯ ಸಿಕ್ಕಿದೆ. ಈ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದೇ ರೀತಿಯಲ್ಲಿ 2002 ರಲ್ಲಿ ಗುಜರಾತ್ ಗಲಭೆ, 2013 ರಲ್ಲಿ ಮಜಾಫರ್ ನಗರ ಗಲಭೆ ನಡೆಸಿದ ದೊಡ್ಡ ನಾಯಕರಿಗೂ ಶಿಕ್ಷೆಯಾಗಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا