Urdu   /   English   /   Nawayathi

ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಬಾಲಕನ ಸ್ಥಿತಿ ಗಂಭೀರ

share with us

ಚಿತ್ರದುರ್ಗ: 22 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿರಿಯೂರು ತಾಲ್ಲೂಕಿನ ಹುಲಿತೊಟ್ಲು ಗ್ರಾಮದ ಮೂರು ಮಕ್ಕಳಲ್ಲಿ ಮುದ್ದುರಾಜು (10) ಎಂಬ ಬಾಲಕನ ಸ್ಥಿತಿ ಗಂಭೀರವಾಗಿದೆ.  ದಾವಣಗೆರೆಯ ಎಸ್‌.ಎಸ್‌.ಹೈಟೆಕ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಯಂದಿರನ್ನು ಕಳೆದುಕೊಂಡಿರುವ ಈ ಮಕ್ಕಳಿಗೆ ಬದುಕುಳಿದ ಸದಾಶಿವ ಮಾತ್ರ ಆಸರೆ.

ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ತಹಶೀಲ್ದಾರ್‌ ವೆಂಕಟೇಶಯ್ಯ ಗ್ರಾಮಕ್ಕೆ ಭೇಟಿ ನೀಡಿ ತಲಾ 5 ಸಾವಿರದಂತೆ 20 ಸಾವಿರ ಪರಿಹಾರ ವಿತರಿಸಿದರು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು, ವಿಧಿವಿಜ್ಞಾನ ಹಾಗೂ ಆಹಾರ ಪ್ರಯೋಗಾಲಯದ ವರದಿಗೆ ಕಾಯುತ್ತಿದ್ದಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا