Urdu   /   English   /   Nawayathi

ನಾಗರಹೊಳೆಯಲ್ಲಿ ಹುಲಿ ದಾಳಿ: ವ್ಯಕ್ತಿ ಸಾವು

share with us

ಮೈಸೂರು: 25 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಹೆಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕಾಡಂಚಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೃಷ್ಣ ಅಲಿಯಾಸ್ ಮಧು (28) ಮೃತ ವ್ಯಕ್ತಿಯೆಂದು ಗುರ್ತಿಸಲಾಗಿದೆ. ಈತ ಮಾನಿಮೂಲೆ ಹಾಡಿ ನಿವಾಸಿದ್ದು, ಕಟ್ಟಿಗೆ ತರುವ ಸಲುವಾಗಿ ಅರಣ್ಯ ಪ್ರದೇಶಕ್ಕೆ ತೆರಳಿದ್ದನೆಂದು ಹೇಳಲಾಗುತ್ತಿದೆ. 

ಕಟ್ಟಿಗೆ ತರಲು ಹೋಗಿದ್ದ ಮಧು ಅವರು ಸಂಜೆಯಾದರೂ ಹಿಂತಿರುಗದ ಹಿನ್ನಲೆಯಲ್ಲಿ ಸ್ಥಳೀಯರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಭಾಗಶಃ ತಿಂದು ಹಾಕಿದ್ದ ದೇಹವೊಂದು ಸ್ಥಳದಲ್ಲಿ ಪತ್ತೆಯಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಧಾವಿಸಿದ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು, ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಮಾನವ ವಾಸಸ್ಥಳಕ್ಕೆ ಬಾರದಂತೆ ನೋಡಿಕೊಳ್ಳಲು ಶೀಘ್ರದಲ್ಲಿಯೇ ಬೇಲಿಗಳನ್ನು ಹಾಕಲಾಗುತ್ತದೆ. ಮೃತನ ಕುಟುಂಬಕ್ಕೆ ಪರಿಹಾರ ಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا