Urdu   /   English   /   Nawayathi

ಸಮಯ ಬಂದಾಗ ಮೈತ್ರಿ ಸೂತ್ರದ ಬಗ್ಗೆ ತಿಳಿಸುತ್ತೇವೆ: ತೇಜಸ್ವಿ ಯಾದವ್‌

share with us

ಪಟ್ನಾ: 30 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಮೈತ್ರಿ ಸೂತ್ರವನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದಿರುವ ಬಿಹಾರ ವಿಧಾನಸಭೆ ವಿರೋಧ ಪಕ್ಷ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ವಿರೋಧ ಪಕ್ಷಗಳ ಮೈತ್ರಿಯು ಬಿಹಾರ ಮತ್ತು ಜಾರ್ಖಂಡ್‌ನಿಂದ ಎನ್‌ಡಿಎ ಅನ್ನು ಹೊರಹಾಕಲಿದ್ದು, 2019ರಲ್ಲಿ ಮೋದಿ ಸರ್ಕಾರ ಪತನಗೊಳ್ಳುವುದನ್ನು ಖಚಿತಗೊಳಿಸಲಿದೆ ಎಂದು ಹೇಳಿದ್ದಾರೆ. ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಜೆಡಿ ಮುಖ್ಯಸ್ಥ ಹಾಗೂ ತಂದೆ ಲಾಲೂ ಪ್ರಸಾದ್‌ ಯಾದವ್‌ ಅವರನ್ನು ಲೋಕ ಸಮತಾ ಪಕ್ಷದ ಮುಖ್ಯಸ್ಥ ಉಪೇಂದ್ರ ಕುಶ್ವಾಹ, ವಿಕಾಸಿಲ್‌ ಇನ್ಸಾನ್‌ ಪಕ್ಷದ ಮುಕೇಶ್‌ ಸಹನಿ ಅವರೊಂದಿಗೆ ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಯಾದವ್‌, ‘ದಯವಿಟ್ಟು ತಾಳ್ಮೆಯಿಂದಿರಿ. ನಮ್ಮ ಕಾರ್ಯತಂತ್ರಗಳನ್ನು ಮಾಧ್ಯಮಗಳಿಗೆ ಈಗ ಹೇಳುವುದಿಲ್ಲ. ಸಮಯ ಬಂದಾಗ ತಿಳಿಸುತ್ತೇವೆ’ ಎಂದರು. ನಮ್ಮ ತಂದೆಯವರ ಆರೋಗ್ಯ ಸ್ಥಿತಿ ಬಗ್ಗೆ ಕುಟುಂಬದವರು ಕಾಳಜಿ ವಹಿಸುತ್ತಿದ್ದಾರೆ ಎಂದೂ ಹೇಳಿದರು.

ಬಿಹಾರದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತನ್ನ ಮಿತ್ರ ಪಕ್ಷಗಳೊಂದಿಗೆ ಎನ್‌ಡಿಎ ಸೀಟು ಹಂಚಿಕೆ ಮಾಡಿಕೊಂಡ ಬಳಿಕ ಈ ಮಾತುಕತೆ ನಡೆದಿದ್ದು, ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ‘ಬಿಜೆಪಿ ಸೋಲಿಸುವ ಸಲುವಾಗಿಯೇ ವಿರೋಧ ಪಕ್ಷಗಳು ಒಂದಾಗಿವೆ’ ಎಂದು ಯಾದವ್‌ ಹಾಗೂ ಉಪೇಂದ್ರ ಹೇಳಿಕೆ ನೀಡಿದ್ದಾರೆ. ಆದರೆ, ಸೀಟು ಹಂಚಿಕೆ ಕುರಿತು ಮಾಹಿತಿ ಬಹಿರಂಗಪಡಿಸಿಲ್ಲ. ಸಾರ್ವತ್ರಿಕ ಚುನಾವಣೆ ಬಳಿಕ ಮಹಾಮೈತ್ರಿ ಕೂಟ ಹೊಸ ಅಧ್ಯಾಯ ಬರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ತೇಜಸ್ವಿ, ತೆಲುಗು ದೇಶಂ, ಶಿವಸೇನಾ ಪಕ್ಷಗಳನ್ನು ಉದಾಹರಣೆಯಾಗಿಸಿ ಎನ್‌ಡಿಎ ಮಿತ್ರ ಪಕ್ಷಗಳು ಹಾಗೂ ಬಿಜೆಪಿ ನಡುವೆ ಬಿರುಕು ಮೂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು. ‘ಬಿಜೆಪಿಯು ಸಮಾಜವನ್ನು ಒಡೆಯುವ ಕಾರ್ಯಮಾಡುತ್ತಿದೆ. ಕೇಸರಿ ಪಕ್ಷವನ್ನು ತೊಡೆದುಹಾಕಲು ಪ್ರತಿಯೊಬ್ಬರೂ ಬಯಸಿದ್ದಾರೆ’ ಎಂದು ಹೇಳಿದರು. ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ವಿರುದ್ಧ ಹರಿಹಾಯ್ದ ಲಾಲೂ ಪುತ್ರ, ಅವರಿಗೆ(ನಿತೀಶ್‌ ಕುಮಾರ್‌ಗೆ) ರಾಜ್ಯದ ಮೇಲಿನ ಕಾಳಜಿಗಿಂತ ಲೋಕಸಭೆ ಸೀಟು ಹಂಚಿಕೆ ಮೇಲಿನ ಒಲವು ಹೆಚ್ಚಾಗಿದೆ ಎಂದು ದೂರಿದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا