Urdu   /   English   /   Nawayathi

ಕಾರ್ಯಾಚರಣೆಗೆ ಧುಮುಕಿದ ನೌಕಾಪಡೆ ಈಜುಗಾರರು

share with us

ಶಿಲ್ಲಾಂಗ್‌: 30 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಮೇಘಾಲಯದ ಗಣಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ನೌಕಾಪಡೆಯ ಈಜುಗಾರರು ಧುಮುಕಿದ್ದಾರೆ. ಇಲ್ಲಿನ ಪೂರ್ವ ಜೈಂತಿಯಾ ಹಿಲ್ಸ್‌ ಜಿಲ್ಲೆಯ ಲುಂಥಾರಿ ಗ್ರಾಮದಲ್ಲಿ ಕಲ್ಲಿದ್ದಲು ಗಣಿಯ ಸುರಂಗದಲ್ಲಿ 15 ಕಾರ್ಮಿಕರು ಸಿಲುಕಿದ್ದಾರೆ. ನದಿ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ನೌಕಾಪಡೆಯ ಈಜುಗಾರರನ್ನು ವಿಶಾಖಪಟ್ಟಣದಿಂದ ಕರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆ ವೇಳೆಗೆ 15 ಈಜುಗಾರರ ತಂಡ ಕಾರ್ಯಾಚರಣೆಗೆ ಇಳಿಯಿತು. ಇದರೊಂದಿಗೆ ಹೆಚ್ಚುವರಿಯಾಗಿ 15 ಪಂಪ್‌ಸೆಟ್‌ಗಳನ್ನು ತಂದು ಸುರಂಗದಿಂದ ನೀರನ್ನು ಹೊರತೆಗೆಯಲಾಗುತ್ತಿದೆ. 

‘ನೀರಿನ ಮಟ್ಟ ಇನ್ನೂ ಕಡಿಮೆಯಾಗಿಲ್ಲ. ಭಾನುವಾರ ಬೆಳಿಗ್ಗೆಯಿಂದ ಕಾರ್ಯಾಚರಣೆ ಮುಂದುವರಿಸುತ್ತೇವೆ’ ಎಂದು ಎನ್‌ಡಿಆರ್‌ಎಫ್‌ ಅಧಿಕಾರಿ ಸಂತೋಷಕುಮಾರ್‌ ಸಿಂಗ್‌ ಹೇಳಿದರು. ಡಿಸೆಂಬರ್‌ 14ರಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಎನ್‌ಡಿಆರ್‌ಎಫ್‌ ಸಿಬ್ಬಂದಿಯು ಕಾರ್ಮಿಕರ ರಕ್ಷಣೆಗಾಗಿ ಸತತ ಪ್ರಯತ್ನ ನಡೆಸುತ್ತಿದ್ದಾರೆ. ಕಾರ್ಮಿಕರನ್ನು ಜೀವಂತವಾಗಿ ರಕ್ಷಿಸಲು ಪವಾಡವೇ ನಡೆಯಬೇಕು ಎಂದು ಸಿಬ್ಬಂದಿ ಹೇಳುತ್ತಾರೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا