Urdu   /   English   /   Nawayathi

ಕುಕ್ಕರ್ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರ ಗಾಯ; ಪೋಷಕರ ಆಕ್ರೋಶ

share with us

ಮಂಡ್ಯ: 01 ಜನುವರಿ (ಫಿಕ್ರೋಖಬರ್ ಸುದ್ದಿ) ಕುಕ್ಕರ್ ಸ್ಫೋಟಗೊಂಡ ಪರಿಣಾಮ 4ನೇ ತರಗತಿ ವಿದ್ಯಾರ್ಥಿನಿ ಮೈ ಮೇಲೆ ಬಿಸಿ ಸಾಂಬಾರ್ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಪಾಂಡವಪುರ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಸಂಗಾಪುರ ಗ್ರಾಮದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಸಿಂಚನಾಳನ್ನು ಶಿಕ್ಷಕರು ಬಿಸಿಯೂಟದ ಅಡುಗೆ ಸಹಾಯಕ್ಕೆ ಕಳುಹಿಸಿದ್ದರು. ಈ ಸಂದರ್ಭದಲ್ಲಿ ಕುಕ್ಕರ್ ಸ್ಫೋಟಗೊಂಡಿದ್ದರಿಂದ ವಿದ್ಯಾರ್ಥಿನಿಯ ಕೈ, ಕಾಲು ಹಾಗೂ ಬೆನ್ನಿನ ಮೇಲೆ ಬಿಸಿ ಸಾಂಬಾರ್ ಬಿದ್ದಿರುವುದಾಗಿ ವರದಿ ತಿಳಿಸಿದೆ.

ಮೇಲುಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಅಲ್ಲದೇ ಅಡುಗೆ ಸಹಾಯಕ್ಕೆ ಮಕ್ಕಳನ್ನು ಬಳಸಿಕೊಳ್ಳುವುದು ಯಾಕೆ ಎಂದು ಪೋಷಕರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿ ಸಿಂಚನಾಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا