Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಲಖನೌ: 12 ಜನುವರಿ (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶದಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಜೊತೆಯಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಿವೆ. 38 ಕ್ಷೇತ್ರಗಳಲ್ಲಿ ಬಿಎಸ್ಪಿ, 38 ಕ್ಷೇತ್ರಗಳಲ್ಲಿ ಎಸ್ಪಿ ಸ್ಪರ್ಧಿಸಲು ನಿರ್ಧರಿಸಿದ್ದು, ಎರಡು ಕ್ಷೇತ್ರಗಳನ್ನು ಇತರ ಪಕ್ಷಗಳಿಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳನ್ನು ಪರೋಕ್ಷವಾಗಿ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಬಿಟ್ಟುಕೊಡಲಾಗಿದೆ. ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಮುಂಬರುವ ಲೋಕಸಭಾ ಚುನಾವಣೆಯನ್ನು ಎಸ್ಪಿ, ಬಿಎಸ್ಪಿ ಜೊತೆಯಾಗಿ ಎದುರಿಸಲಿದ್ದು, ದೇಶದಲ್ಲಿ ಹೊಸ ರಾಜಕೀಯ ಕ್ರಾಂತಿಯಾಗಲಿದೆ.ಇದು ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿದ್ದೆಗೆಡಿಸಲಿದೆ ಎಂದರು. ಎಸ್ಪಿ , ಬಿಸ್ಪಿ ಜೊತೆಗಿನ ಮೈತ್ರಿ ಇದೇ ಮೊದಲಲ್ಲ. 1990ರ ಹಿಂದೆಯೇ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕಾನ್ಪಿರಾಂ ಹಾಗೂ ಮುಲಾಯಂ ಸಿಂಗ್ ಯಾದವ್ ಒಪ್ಪಂದ ಮಾಡಿಕೊಂಡಿದ್ದರು ಎಂದು ತಿಳಿಸಿದರು. ಆ ಮೈತ್ರಿ ಬಹಳ ಕಾಲದವರೆಗೂ ಮುಂದುವರೆಯಲಿಲ್ಲ. ಆದರೆ, ಈಗ ಅದೇ ಸಿದ್ಧಾಂತ ಹಾಗೂ ಚಿಂತನೆಗಳೊಂದಿಗೆ ಜೊತೆಯಾಗಿ ಚುನಾವಣೆಯನ್ನು ಎದುರಿಸುವುದಾಗಿ ತಿಳಿಸಿದರು.
ಬಿಜೆಪಿಯ ಸುಳ್ಳಿನ ಭರವಸೆಗಳಿಂದ ಜನ ಬೇಸತ್ತು ಹೋಗಿದ್ದಾರೆ. ಆದ್ದರಿಂದ ಈ ಲೋಕಸಭಾ ಚುನಾವಣೆಯಲ್ಲಿ ಜೊತೆಯಾಗಿ ಎದುರಿಸಲು ನಿರ್ಧರಿಸಿದ್ದು, ಇದು ದೇಶದ ರಾಜಕೀಯದಲ್ಲಿ ಹೊಸ ಕ್ರಾಂತಿ ಉಂಟುಮಾಡಲಿದೆ ಎಂದು ಮಾಯಾವತಿ ಹೇಳಿದರು. ಆಡಳಿತ ನಡೆಸಿರುವ ಕಾಂಗ್ರೆಸ್, ಬಿಜೆಪಿ ಎರಡು ಪಕ್ಷಗಳ ನೀತಿಗಳ ಹೆಚ್ಚುಕಡಿಮೆ ಒಂದೇ ಆಗಿವೆ. ರಕ್ಷಣಾ ಒಪ್ಪಂದದ ಭ್ರಷ್ಟಾಚಾರದಲ್ಲಿ ಉಭಯ ಪಕ್ಷಗಳು ತೊಡಗಿರುವುದನ್ನು ನಾವು ನೋಡುತ್ತಿದ್ದೇವೆ. ಕಾಂಗ್ರೆಸ್ ದೇಶದಲ್ಲಿ ತುರ್ತುಪರಿಸ್ಥಿತಿಯನ್ನು ಹೇರಿತ್ತು. ಇಂದು ಅಘೋಷಿತ ತುರ್ತುಪರಿಸ್ಥಿತಿಯ ಪರಿಸ್ಥಿತಿ ಇದೆ ಎಂದು ಮಾಯಾವತಿ ಆರೋಪಿಸಿದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |