Urdu   /   English   /   Nawayathi

ಮಹಾರಾಷ್ಟ್ರ; ನರ್ಮದಾ ನದಿಯಲ್ಲಿ ಹಡಗು ಮುಳುಗಡೆ, 6 ಮಂದಿ ಜಲಸಮಾಧಿ

share with us

ಮಹಾರಾಷ್ಟ್ರ: 15 ಜನುವರಿ (ಫಿಕ್ರೋಖಬರ್ ಸುದ್ದಿ) ಹಡಗು ಮುಳುಗಿದ ಪರಿಣಾಮ ಆರು ಮಂದಿ ಜಲಸಮಾಧಿಯಾಗಿರುವ ಘಟನೆ ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ನರ್ಮದಾ ನದಿಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಡಗಿನಲ್ಲಿದ್ದ ಸುಮಾರು 36 ಮಂದಿಯನ್ನು ಈವರೆಗೆ ರಕ್ಷಿಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ. ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಗಂಗಾ ಪೂಜೆಗಾಗಿ ಹಡಗಿನಲ್ಲಿ ಸುಮಾರು 60 ಮಂದಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಮುಳುಗು ತಜ್ಞರು ಹಾಗೂ ರಕ್ಷಣಾ ತಂಡ ಆಗಮಿಸಿದ್ದು ಕಾರ್ಯಾಚರಣೆ ಮುಂದುವರಿಸಿದೆ. ಬುಡಕಟ್ಟು ಜನರನ್ನು ಹೊಂದಿರುವ ಜಿಲ್ಲೆಯಾದ ಉತ್ತರ ಮಹಾರಾಷ್ಟ್ರದ ಗ್ರಾಮದ ನಿವಾಸಿಗಳು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا