Urdu   /   English   /   Nawayathi

ಸೇತುವೆ ಮೇಲಿಂದ ಕೆಳಗುರುಳಿದ ಕ್ಯಾಂಟರ್​​: 8 ಮಂದಿ ಗಂಭೀರ

share with us

ಹಾಸನ: 17 ಜನುವರಿ (ಫಿಕ್ರೋಖಬರ್ ಸುದ್ದಿ) ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್​ವೊಂದು ಅಪಘಾತಕ್ಕೀಡಾಗಿ ಎಂಟಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾಗಲು ಬಳಿ ನಡೆದಿದೆ. ಸೇತುವೆ ಮೇಲಿಂದ ಕ್ಯಾಂಟರ್ ಕೆಳಗುರುಳಿದ್ದು, ಸದ್ಯ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಕೇರಳ ರಾಜ್ಯಕ್ಕೆ ಸೇರಿದ ಕ್ಯಾಂಟರ್ ಇದಾಗಿದ್ದು, ಸಕಲೇಶಪುರದಲ್ಲಿ ನಡೆಯುತ್ತಿರುವ ಕೆಲವು ಕಾಮಗಾರಿಗಳಿಗೆ ಸಿಮೆಂಟ್ ಮಿಕ್ಸ್ ಮಾಡಲು ಯಂತ್ರವೊಂದನ್ನು ಕ್ಯಾಂಟರ್​ನಲ್ಲಿ ಹಾಕಿಕೊಂಡು ಹೊರಟಿದ್ದ ವೇಳೆ ಘಟನೆ ಜರುಗಿದೆ. ಕ್ಯಾಂಟರ್​ನಲ್ಲಿ ಒಟ್ಟು 4 ಮಹಿಳೆಯರು ಸೇರಿದಂತೆ 15 ಮಂದಿ ಕೂಲಿ ಕಾರ್ಮಿಕರು ಇದ್ದರು ಎನ್ನಲಾಗಿದೆ. ಘಟನೆಯಲ್ಲಿ ಮೂವರು ಮಹಿಳೆಯರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನುಳಿದ 5 ಮಂದಿಯನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತವಾದ ಸೇತುವೆ ಮೇಲೆ ಈ ಹಿಂದೆ ಗಣೇಶ್ ಮತ್ತು ಪೂಜಾ ಗಾಂಧಿ ಅಭಿನಯದ ಮುಂಗಾರುಮಳೆ ಚಲನಚಿತ್ರವನ್ನು ಚಿತ್ರೀಕರಿಸಲಾಗಿತ್ತು. ಜೊತೆಗೆ ಹೇಮಾವತಿ ನದಿ ನಡುವೆ ಕಟ್ಟಲಾಗಿರುವ ಸೇತುವೆ ಇದಾಗಿದ್ದು, ಸ್ವಲ್ಪ ಹಳೆಯದಾಗಿದೆ.

ಸ್ಥಳಕ್ಕೆ ಈಗಾಗಲೇ ಪೊಲೀಸರು ಆಗಮಿಸಿದ್ದು, ಅಪಘಾತಕ್ಕೀಡಾದವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದ್ದ ಕ್ಯಾಂಟರ್​ಅನ್ನು ಕ್ರೇನ್ ಮೂಲಕ ಮೇಲಕ್ಕೆತ್ತುವ ಕಾರ್ಯ ಮಾಡುತ್ತಿದ್ದಾರೆ. ಈ ಸಂಬಂಧ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا