Urdu   /   English   /   Nawayathi

ಸಾಮಾಜಿಕ ಜಾಲತಾಣದಲ್ಲಿ ಶಾಸಕ ‘ಆನಂದ್ ಸಿಂಗ್’ ಫೋಟೋ ವೈರಲ್..!

share with us

ಬೆಂಗಳೂರು: 21 ಜನುವರಿ (ಫಿಕ್ರೋಖಬರ್ ಸುದ್ದಿ) ಈಗಲ್ ಟಾನ್ ರೆಸಾರ್ಟ್ ನಲ್ಲಿ ಶಾಸಕರ ಪಾರ್ಟಿ ವೇಳೆ ಹಲ್ಲೆಗೆ ಒಳಗಾಗಿದ್ದ ವಿಜಯನಗರ ಶಾಸಕ ಆನಂದ್ ಸಿಂಗ್ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ತಲೆಗೆ ಭಾರಿ ಪೆಟ್ಟು ಬಿದ್ದಿದ್ದು ಮುಖ ಊದಿಕೊಂಡಿದೆ ಎಂದು ಫೋಟೋಗಳು ಹರಿದಾಡುತ್ತಿವೆ. ಗಲಾಟೆ ವೇಳೆ ಇತರೆ ಮೂವರು ಶಾಸಕರು ಹಾಗೂ ಗನ್ ಮ್ಯಾನ್ ಸೇರಿ ಹಲವರ ಮೇಲೆ ಮನಬಂದಂತೆ ಥಳಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ಸ್ವಯಂ ಪ್ರೇರಿತ ದೂರು ದಾಖಲು ಮಾಡಲು ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದು ಆನಂದ್ ಸಿಂಗ್ ಅವರು ಚೇತರಿಸಿಕೊಂಡ ನಂತರ ಅವರ ಹೇಳಿಕೆ ಪಡೆಯಲು ಪ್ರಯತ್ನಿಸಲಾಗುತ್ತಿದೆ. ಇನ್ನೂ ಎರಡು ಮೂರು ದಿನ ಐಸಿಯುವಿನಲ್ಲಿ ಚಿಕೆತ್ಸೆ ಪಡೆಯಬೇಕಾಗಿರುವುದರಿಂದ ನಂತರದ ದಿನಗಳಲ್ಲಿ ಅವರು ನೀಡುವ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಲಿದೆ. 

ಶಾಸಕ ಗಣೇಶ್‍ಗೆ ಸಂಕಷ್ಟ..? :  ಬಿಡದಿಯ ಈಗಲ್‍ಟನ್ ರೆಸಾಟ್‍ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಲು ಅವರ ಕುಟುಂಬ ಸದಸ್ಯರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಆನಂದ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದು ಅವರ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಆತಂಕ ಉಂಟು ಮಾಡಿದೆ. ಒಮ್ಮೆ ದೂರು ದಾಖಲಾದರೆ, ಕಂಪ್ಲಿ ಶಾಸಕ ಗಣೇಶ್ ಮೇಲೆ ಆರೋಪ ಕೇಳಿ ಬಂದಿರುವುದರಿಂದ ಅವರು ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು. ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಕಾಂಗ್ರೆಸ್ ನಾಯಕರೂ ತೊಡಗಿದ್ದಾರೆ. ಮುಂದೇನಾಗುತ್ತದೋ ಎಂಬ ಲೆಕ್ಕಾಚಾರವೂ ಶುರುವಾಗಿದೆ. ಗಣೇಶ್ ಸ್ಪಷ್ಟನೆ: ಅಂದು ಊಟ ಮಾಡುವ ವೇಳೆ ಶಾಸಕ ಭೀಮಾ ನಾಯಕ್ ಹಾಗೂ ಆನಂದ್ ಸಿಂಗ್ ನಡುವೆ ಏರು ದನಿಯಲ್ಲಿ ವಾಗ್ವಾದ ನಡೆದಿತ್ತು. ಇದನ್ನು ಬಿಡಿಸಲು ಹೋಗಿದ್ದೆ ಅಷ್ಟೆ. ಹಲ್ಲೆ ಅಥವಾ ಮಾರಾಮಾರಿ ಯಾವುದು ನಡೆದಿಲ್ಲ ಎಂದು ಕಂಪ್ಲಿ ಶಾಸಕ ಗಣೇಶ್ ಸ್ಪಷ್ಟನೆ ನೀಡಿದ್ದಾರೆ. ಆನಂದ್‍ಸಿಂಗ್ ನನಗೆ ಅಣ್ಣ ಇದ್ದಂತೆ. ಅವರ ಬಗ್ಗೆ ಅಪಾರ ಗೌರವವಿದೆ. ಅವರಿಗೆ ಬಾಟಲಿಯಿಂದ ಹೊಡೆದೆ ಮತ್ತು ಗನ್‍ಮ್ಯಾನ್‍ಗೆ ಕಚ್ಚಿದೆ ಎಂಬುದೆಲ್ಲಾ ಊಹಾಪೋಹ ಎಂದು ಹೇಳಿದ್ದಾರೆ. ಆನಂದ್‍ಸಿಂಗ್ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಭೀಮಾ ನಾಯಕ್ ಮತ್ತು ಅವರ ಗಲಾಟೆ ನಡೆದಿರುವುದಲ್ಲಿ ಇದರಲ್ಲಿ ನನ್ನ ಪಾತ್ರವಿಲ್ಲ. ಇದರಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا