Urdu   /   English   /   Nawayathi

ಬನವಾಸಿ ಬಳಿ ರಸ್ತೆ ಅಪಘಾತ: ಲಾರಿ ಹರಿದು ಗ್ರಾ.ಪಂ ಅಧ್ಯಕ್ಷ ಸೇರಿ ಇಬ್ಬರ ಸಾವು

share with us

ಶಿರಸಿ: 27 ಜನುವರಿ (ಫಿಕ್ರೋಖಬರ್ ಸುದ್ದಿ) ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗ್ರಾ.ಪಂ ಅಧ್ಯಕ್ಷ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಸೊರಬ ರಸ್ತೆ ಬಳಿ ನಡೆದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾ.ಪಂ ಅದ್ಯಕ್ಷ ಮಯೂರಗೌಡ(45), ಬನವಾಸಿ ಮೂಲದ ಮಲ್ಲೇಶಿ ಶೆಟ್ಟಿ(40) ಮೃತರು. ಬೈಕ್​ನಲ್ಲಿ ಬರುತ್ತಿದ್ದ ಇವರ ಮೈಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا