Urdu   /   English   /   Nawayathi

ದೂರು ನೀಡಲು ಬಂದ ಮಹಿಳೆ ಮೇಲೆ ದರ್ಪ; ಎಎಸ್ ಐ ಅಮಾನತು

share with us

ಬೆಂಗಳೂರು: 29 ಜನುವರಿ (ಫಿಕ್ರೋಖಬರ್ ಸುದ್ದಿ) ದೂರು ನೀಡಲು ಬಂದ ಮಹಿಳೆ ಮತ್ತು ಮನೆಯವರ ಮೇಲೆ ದರ್ಪದಿಂದ ವರ್ತಿಸಿದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಎಎಸ್ ಐ ರೇಣುಕಯ್ಯನನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆಗೆ ಮಹಿಳೆ, ಮಗಳು ಸೇರಿದಂತೆ ಮನೆಯವರು ಬಂದಿದ್ದ ವೇಳೆ ಎಎಸ್ ಐ ಮತ್ತು ಸಿಬ್ಬಂದಿ ಆಕೆಯ ಕುತ್ತಿಗೆ ಹಿಡಿದು ಹೊರಗೆ ತಳ್ಳಿ, ಹೊಡೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.

ಘಟನೆ ಗಮನಕ್ಕೆ ಬಂದ ಕೂಡಲೇ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು, ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಠಾಣೆಗೆ ದೂರು ನೀಡಲು ಬಂದವರ ಜೊತೆ ಈ ರೀತಿ ನಡೆದುಕೊಳ್ಳಬಾರದು. ತಕ್ಷಣಕ್ಕೆ ಎಎಸ್ ಐ ರೇಣುಕಯ್ಯ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا