Urdu   /   English   /   Nawayathi

ಬರ: ರಾಜ್ಯಕ್ಕೆ 949 ಕೋಟಿ

share with us

ನವದೆಹಲಿ: 30 ಜನುವರಿ (ಫಿಕ್ರೋಖಬರ್ ಸುದ್ದಿ) ಮುಂಗಾರು ವೈಫಲ್ಯದಿಂದ ಕಳೆದ ವರ್ಷ ರಾಜ್ಯದ 100 ತಾಲ್ಲೂಕುಗಳಲ್ಲಿ ಆವರಿಸಿದ್ದ ಬರದಿಂದ ಉಂಟಾದ ನಷ್ಟ ಪರಿಹಾರವಾಗಿ ಕೇಂದ್ರ ಸರ್ಕಾರ 949.49 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಿದೆ.  ಕೇಂದ್ರದ ಗೃಹ ಸಚಿವ ರಾಜನಾಥ ಸಿಂಗ್‌ ನೇತೃತ್ವದ ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ (ಎನ್‌ಡಿಆರ್‌ಎಫ್‌)ಯಉನ್ನತ ಮಟ್ಟದ ಸಮಿತಿಯು ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ಬರ ಮತ್ತು ಪ್ರವಾಹದಿಂದ ತತ್ತರಿಸಿರುವ ರಾಷ್ಟ್ರದ ಆರು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಎನ್‌ಡಿಆರ್‌ಎಫ್‌ ಅಡಿ ಒಟ್ಟು 7,214.03 ಕೋಟಿ ಪರಿಹಾರ ಬಿಡುಗಡೆ ಮಾಡಲು ಸಮಿತಿ ನಿರ್ಧರಿಸಿದೆ. ಗುಜರಾತ್‌ಗೆ 127.60 ಕೋಟಿ, ಮಹಾರಾಷ್ಟ್ರಕ್ಕೆ 4,714.20 ಕೋಟಿ ಪರಿಹಾರ ಒದಗಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಮುಂಗಾರು ವೈಫಲ್ಯಕ್ಕೆ ಒಳಗಾಗಿದ್ದ 24 ಜಿಲ್ಲೆಗಳ 100 ತಾಲ್ಲೂಕುಗಳನ್ನು ‘ಬರಪೀಡಿತ’ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ, ಒಟ್ಟು 27.32 ಲಕ್ಷ ಹೆಕ್ಟೆರ್‌ನಲ್ಲಿ ಬೆಳೆ ಹಾನಿಯಾಗಿದೆ ಎಂದು ತಿಳಿಸಿತ್ತು. ಅಂದಾಜು 16,662 ಕೋಟಿಯಷ್ಟು ನಷ್ಟ ಉಂಟಾಗಿದ್ದು, ನಿಯಮಾನುಸಾರ 2,434 ಕೋಟಿ ಪರಿಹಾರ ನೀಡುವಂತೆ ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು.

ರಾಜ್ಯದ ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ರಾಜ್ಯದ ಮನವಿಯ ಮೇರೆಗೆ ಕೇಂದ್ರವು ಕಳೆದ ನವೆಂಬರ್‌ನಲ್ಲಿ 546.21 ಕೋಟಿ ಮಂಜೂರು ಮಾಡಿತ್ತು. ಪ್ರವಾಹದಿಂದ 3,705 ಕೋಟಿ ಮೌಲ್ಯದ ನಷ್ಟ ಉಂಟಾಗಿದ್ದು, 1,199.80 ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರಕ್ಕೆ ಮನವಿ ಮಾಡಿತ್ತು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا