Urdu   /   English   /   Nawayathi

ಕಗ್ಗಲೀಪುರ ಬಳಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

share with us

ಬೆಂಗಳೂರು: 05 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಒಂದು ಕಗ್ಗಲೀಪುರದ ಬಳಿ ತುರ್ತು ಭೂ ಸ್ಪರ್ಶ ಮಾಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ರಮೇಶ್ ಮತ್ತು ಪೂನ್ ಎಂಬ ಐಎಎಫ್‍ನ ಇಬ್ಬರು ಪೈಲೆಟ್‍ಗಳು ಅಪಾಯದಿಂದ ಪಾರಾಗಿದ್ದಾರೆ.  ಕಾಪ್ಟರ್‍ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಎಚ್ಚೆತ್ತುಕೊಂಡು ಖಾಲಿ ಜಮೀನೊಂದರಲ್ಲಿ ತಟ್ಟಿಗುಪ್ಪೆ ಬಳಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ. ಕಳೆದ ಶುಕ್ರವಾರ (ಫೆ.1) ಮಿರಾಜ್-2000 ಯುದ್ಧ ವಿಮಾನ ಎಚ್‍ಎಎಲ್ ವಿಮಾನ ನಿಲ್ದಾಣದ ಬಳಿ ಪತನಗೊಂಡು ಇಬ್ಬರು ಪೈಲೆಟ್‍ಗಳು ಮೃತಪಟ್ಟಿದ್ದರು. ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸೇನಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಎಂದಿನಂತೆ ಹೆಲಿಕಾಪ್ಟರ್ ದೈನಂದಿನ ತರಬೇತಿ ಹಾರಾಟದ ವೇಳೆ ಈ ಘಟನೆ ಸಂಭವಿಸಿದೆ. ಐಎಫ್‍ನ ದಕ್ಷಿಣ ವಲಯ ಮುಖ್ಯಸ್ಥರು ತನಿಖೆಗೆ ಆದೇಶಿಸಿದ್ದು ಸ್ಥಳಕ್ಕೆ ಭೇಟಿ ನೀಡಿರುವ ತಾಂತ್ರಿಕ ತಜ್ಞರು ಕಾಪ್ಟರ್‍ನಲ್ಲಿ ದೋಷ ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا