Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 12 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಇಲ್ಲಿನ ಮಧ್ಯ ದೆಹಲಿಯ ಕರೋಲ್ಬಾಗ್ ಪ್ರದೇಶದಲ್ಲಿದ್ದ ನಾಲ್ಕು ಮಹಡಿಯ ಹೋಟೆಲ್ನಲ್ಲಿ ಸಂಭವಿಸಿದ ಅಗ್ನಿ ಅನಾಹುತಕ್ಕೆ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೀವ ಉಳಿಸಿಕೊಳ್ಳಲು ಮಗು ಸಹಿತ ಇಬ್ಬರು ಕಟ್ಟಡದಿಂದ ಜಿಗಿದು ಬಲಿಯಾಗಿದ್ದಾರೆ. ರಾಜಧಾನಿಯ ಹೃದಯಭಾಗದಲ್ಲಿರುವ 45 ಕೊಠಡಿಗಳಿರುವ ’ಅರ್ಪಿತ್ ಪ್ಯಾಲೇಸ್ ಹೋಟೆಲ್‘ನ ಎರಡನೇ ಮಹಡಿಯಲ್ಲಿ ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ಬೆಂಕಿ ಕಾಣಿಸಕೊಂಡಿದೆ. ಈ ವೇಳೆ ಹೋಟೆಲ್ನಲ್ಲಿ ಗಾಢನಿದ್ರೆಯಲ್ಲಿದ್ದ 53ಮಂದಿ ಪೈಕಿ 17ಮಂದಿ ಸಾವನ್ನಪ್ಪಿದ್ದು, 35 ಮಂದಿ ಗಾಯಗೊಂಡಿದ್ದಾರೆ. ಒಬ್ಬರು ನಾಪತ್ತೆಯಾಗಿದ್ದಾರೆ. ಮೃತರ ಪೈಕಿ 13ಮಂದಿಯ ಗುರುತು ಪತ್ತೆಹಚ್ಚಲಾಗಿದ್ದು, ಇದರಲ್ಲಿ ಮೂವರು ಕೇರಳ, ಮತ್ತಿಬ್ಬರು ಮ್ಯಾನ್ಮಾರ್ ದೇಶದವರು. ’ಬೆಳಿಗ್ಗೆ 4.35ರ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ತಲುಪಿದ್ದು, 24ಕ್ಕೂ ಅಧಿಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ‘ ಎಂದು ಡಿಸಿಪಿ ಮಧುರ್ ವರ್ಮಾ ತಿಳಿಸಿದ್ದಾರೆ.
ಮ್ಯಾಜಿಸ್ಟ್ರೇಟ್ ತನಿಖೆ
ಅಗ್ನಿದುರಂತದ ಕುರಿತಂತೆ ದೆಹಲಿ ಗೃಹ ಸಚಿವ ಸತ್ಯೇಂದರ್ ಜೈನ್ ಅವರು ಮ್ಯಾಜಿಸ್ಟಿರಿಯಲ್ ತನಿಖೆಗೆ ಆದೇಶ ನೀಡಿದ್ದಾರೆ. ಅಲ್ಲದೇ, ಐದು ಮಹಡಿಗಿಂತ ಹೆಚ್ಚಿರುವ ಎಲ್ಲ ಕಟ್ಟಡಗಳ ತಪಾಸಣೆ ನಡೆಸಿ, ಅಗ್ನಿಸುರಕ್ಷತೆ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತಂತೆ ವಾರದ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮದುವೆಗೆ ಬಂದವರು ಬೆಂದು ಹೋದರು: ಕೇರಳದ ಎರ್ನಾಕುಲಂ ಜಿಲ್ಲೆಯ 13 ಮಂದಿ ಗಾಜಿಯಾಬಾದ್ನಲ್ಲಿ ನಡೆಯಲಿರುವ ಮದುವೆಯೊಂದರಲ್ಲಿ ಭಾಗವಹಿಸಲು ಇದೇ ಹೋಟೆಲ್ನ ನಾಲ್ಕು ಕೊಠಡಿಯಲ್ಲಿ ತಂಗಿದ್ದರು. ಬೆಳಿಗ್ಗೆ ಮದುವೆಗೆ ಹೊರಡಲು ತಯಾರಿಯಲ್ಲಿದ್ದ ಸಂದರ್ಭದಲ್ಲೇ ದುರಂತ ಸಂಭವಿಸಿದ ಕಾರಣ, ಮೂವರು ಉಸಿರುಗಟ್ಟಿ ಸಾವನ್ನಪ್ಪಿದ್ದು, ಉಳಿದ 10 ಮಂದಿ ಪಾರಾಗಿದ್ದಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |