Urdu   /   English   /   Nawayathi

ಮುರ್ಡೇಶ್ವರದ ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ಸಾವು

share with us

ಭಟ್ಕಳ: 13 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮೀಪವಿರುವ ಬೈಲೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಸುಮಾರು 4ಗಂಟೆಯ ವೇಳೆಯಲ್ಲಿ ಮಹಿಂದ್ರಾ ಹಾಗೂ ಹೊಂಡಾ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಮಂಕಿಯ ನಿವಾಸಿಗಳಾದ ಎಲೆಕ್ಟ್ರಿಷನ್ ಜಾಫರ್ ಸಾದಿಕ್ ಅವರ ಪುತ್ರ ಮುಹಮ್ಮದ್ ಕೈಫ್(19) ಹಾಗೂ ಅವರ ತಂಗಿ ಆಫ್ರೀನ್(28) ಎಂದು ಗುರುತಿಸಲಾಗಿದೆ. ಕೈಫ್ ತನ್ನ ಬೈಕಿನಲ್ಲಿ ಭಟ್ಕಳದಿಂದ ಮಂಕಿಯ ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇಬ್ಬರಲ್ಲಿ ಒಂದು ಮಗುವಿನ ಸ್ಥಿತಿ ತೀರ ಗಂಭೀರವಾಗಿದ್ದು, ಮಕ್ಕಳನ್ನು ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟವರ ಶವಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಮಂಕಿ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Prayer Timings

Fajr فجر
Dhuhr الظهر
Asr أسر
Maghrib مغرب
Isha عشا