Urdu   /   English   /   Nawayathi

ಪ್ರಚಾರದಲ್ಲಿ ಬಿಜೆಪಿಗಿಂತ ನಾವು ಒಂದು ಹೆಜ್ಜೆ ಮುಂದಿದ್ದೇವೆ : ಸಿದ್ದರಾಮಯ್ಯ

share with us

ಹುಬ್ಬಳ್ಳಿ: 21 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಲೋಕಸಭೆ ಚುನಾವಣೆಗೆ ಎಲ್ಲಾ ಸಿದ್ದತೆ ನಡೆಸಿದ್ದೇವೆ. ಪ್ರಚಾರದಲ್ಲಿ ಬಿಜೆಪಿಗಿಂತ ನಾವು ಒಂದು ಹೆಜ್ಜೆ ಮುಂದೆ ಇದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಮೈತ್ರಿ ಸಂಬಂಧ ಜೆಡಿಎಸ್ ಜತೆ ಇನ್ನು ಮಾತುಕತೆ ನಡೆಸಿಲ್ಲ. ಆದರೆ ಲೋಕಸಭೆ ಚುನಾವಣೆಗೆ ಎಲ್ಲ ತಯಾರಿ ನಡೆಸಿದ್ದೇವೆ. ಈ ಸಂಬಂಧ ಮತ್ತೆ ಸಭೆ ಕರೆದು ಸಮಾಲೋಚನೆ ನಡೆಸುತ್ತೇವೆ ಎಂದರು. ನಿನ್ನೆ ಮಾಜಿ ಸಚಿವ ಅಂಬರೀಶ್ ಅವರ ಪತ್ನಿ ಸುಮಲತಾ ಅವರು ನನ್ನನ್ನು ಭೇಟಿ ಮಾಡಿದ್ದರು ಎಂದು ಹೇಳಿದ ಅವರು, ಮಾತುಕತೆಯ ವಿವರವನ್ನು ಹೇಳಲು ನಿರಾಕರಿಸಿದರು. ಮಾಜಿ ಪ್ರಧಾನಿ ದೇವೇಗೌಡರು ಮೈಸೂರಿನಿಂದ ಸ್ಪರ್ಧಿಸುತ್ತಿದ್ದಾರಂತಲ್ಲ ಎಂಬ ಪ್ರಶ್ನೆಗೆ ಆ ವಿಚಾರ ನನಗೆ ತಿಳಿಯದು. ಚುನಾವಣೆ ಪ್ರಚಾರದಲ್ಲಿ ನಾವು ಬಿಜೆಪಿಯವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದೇವೆ. ಪ್ರಿಯಾಂಕ ಗಾಂಧಿ ಅವರನ್ನು ಪ್ರಚಾರಕ್ಕೆ ಕರೆದುಕೊಂಡು ಬರುತ್ತೇವೆ. ಆದರೆ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು. ರಾಹುಲ್ ಗಾಂಧಿ ಅವರು ಮುಂದಿನ ಪ್ರಧಾನಿ ಆಗಲಿದ್ದಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಈ, ಸಂ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا