Urdu   /   English   /   Nawayathi

ಜನರನ್ನು ಹೆದರಿಸಿ ಕಳ್ಳತನ ಮಾಡಿದ ಮೂವರು ಆರೋಪಿಗಳು ಅಂದರ್

share with us

ಬೆಳಗಾವಿ: 24 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ)ಜನರನ್ನು ಹೆದರಿಸಿ ಹಲ್ಲೆ ಮಾಡಿ ಕಳ್ಳತನ ಮಾಡಿದ ಆರೋಪದಲ್ಲಿ ಬೆಳಗಾವಿ ಪೊಲೀಸರು ಮೂರು ಜನ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 45ಸಾವಿರ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಂಗ್ರಾಳಿಯ ಮಹೇಶ ಸುಂಕದ (20)ವಿವೇಕ ನಾಯಿಕ (23)ಹಾಗೂ ಕಾರ್ತಿಕ ಪಾಟೀಲ (19)ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಶೋಕ ನಗರದಲ್ಲಿ ಫೆ.21ರ ರಾತ್ರಿ ರಜಾಕ್ ಲಾಡಖಾನ್ ಎಂಬುವವರಿಗೆ ಕಲ್ಲಿನಿಂದ ಹೊಡೆದು ಬೈಕ್, ಮೊಬೈಲ್,  ಪರ್ಸ್ ಕಳ್ಳತನ ಮಾಡಿದ್ದರು. ಈ ಬಗ್ಗೆ ರಜಾಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೋಲೀಸರು ಮೂವರನ್ನು ಬಂಧಿಸಿದ್ದು ಅವರಿಂದ ಬೈಕ್, ಮೊಬೈಲ್ ಸೇರಿದಂತೆ ಒಟ್ಟು 45 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  ಈ ಕುರಿತು ‌ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا