Urdu   /   English   /   Nawayathi

ಶ್ರೀನಗರ ಸೇರಿ ಐದು ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಸಂಚಾರಕ್ಕೆ ನಿರ್ಬಂಧ

share with us

ನವದೆಹಲಿ: 27 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಕಾಶ್ಮೀರದ ಬುದ್‌ಗಾವ್ ಜಿಲ್ಲೆಯಲ್ಲಿ ವಾಯುಪಡೆಯ ಎಂಐ–17 ಹೆಲಿಕಾಪ್ಟರ್ ಧರೆಗುರುಳಿದ ಹಿನ್ನೆಲೆಯಲ್ಲಿ ಶ್ರೀನಗರ, ಜಮ್ಮು, ಲೇಹ್, ಚಂಡಿಗಡ ಮತ್ತು ಅಮೃತಸರ ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನ ಸಂಚಾರವನ್ನು ಬುಧವಾರ ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪಾಕಿಸ್ತಾನದಲ್ಲಿದ್ದ ಉಗ್ರಗಾಮಿ ನೆಲೆಗಳ ಮೇಲೆ ಮಂಗಳವಾರ ಭಾರತೀಯ ವಾಯುಪಡೆಯ ವಿಮಾನಗಳ ಮಿಂಚಿನ ದಾಳಿ ನಡೆಸಿದ ನಂತರ ಎರಡೂ ದೇಶಗಳ ಸಂಬಂಧ ಹಳಸಿತ್ತು. ಬುಧವಾರ ಮುಂಜಾನೆಯಿಂದ ಪಾಕ್‌ ಸೇನಾಪಡೆಗಳು ಭಾರತೀಯ ಗಡಿ ಠಾಣೆಗಳ ಮೇಲೆ ದಾಳಿ ಆರಂಭಿಸಿದ್ದವು. ‘ತುರ್ತುಪರಿಸ್ಥಿತಿಯ ಕಾರಣ ವಿಮಾನ ಸಂಚಾರವನ್ನು ನಿರ್ಬಂಧಿಸಲಾಗಿದೆ’ ಎಂದು ಶ್ರೀನಗರದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ. ‘ತುರ್ತುಪರಿಸ್ಥಿತಿಯ ಸ್ವರೂಪ ಏನು’ ಎನ್ನುವ ಪ್ರಶ್ನೆಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡಲಿಲ್ಲ. ಆದರೆ ಬುದ್‌ಗಾವ್ ದುರಂತದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕ್ರಮ ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದೆ.  ವಿಮಾನ ಸಂಚಾರ ನಿಯಂತ್ರಕರು ನಾಗರಿಕ ವಿಮಾನಗಳ ಸಂಚಾರ ನಿರ್ಬಂಧಿಸಲು ಸೂಚನೆ ನೀಡಿದ್ದರು. ಜಮ್ಮು, ಲೇಹ್ ಮತ್ತು ಶ್ರೀನಗರ ವಿಮಾನ ನಿಲ್ದಾಣಗಳಿಗೆ ಬರುತ್ತಿದ್ದ ವಿಮಾನಗಳನ್ನು ಅವುಗಳು ಹೊರಟ ನಿಲ್ದಾಣಗಳಿಗೆ ವಾಪಸ್ ಕಳಿಸಲಾಯಿತು  ಎಂದು ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಪ್ರ, ವಾ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا