Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 04 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿಯಲ್ಲಿ 250ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಿಪಕ್ಷ ನಾಯಕರು ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಿನ್ನೆ ನಡೆದ ಲಕ್ಷ್ಯ್ ಜೀತೋ (ಗುರಿ ಸಾಧಿಸಿ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾ, ಉಗ್ರಗಾಮಿಗಳ ವಿರುದ್ಧದ ವಾಯುಸೇನೆಯ ದಾಳಿಯಲ್ಲಿ 250ಕ್ಕೂ ಅಧಿಕ ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು. ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಕಷ್ಟು ಬೆಳವಣಿಗೆಗಳಾಗಿದ್ದು, ಉರಿ, ಪುಲ್ವಾಮ ಪ್ರಮುಖ ಬೆಳವಣಿಗೆಗಳಾಗಿವೆ. ಉರಿ ದಾಳಿಯ ಬಳಿಕ ನಮ್ಮ ಸೇನೆ ಮೊದಲ ಬಾರಿಗೆ ಪಾಕ್ ಗಡಿಯೊಳಗೆ ನುಗ್ಗಿ ಸರ್ಜಿಕಲ್ ದಾಳಿ ನಡೆಸಿ ಸಾಕಷ್ಟು ಉಗ್ರರನ್ನು ಕೊಂದು ಹಾಕಿತ್ತು. ಆ ಬಳಿಕ ಪುಲ್ವಾಮ ದಾಳಿಯ ಕೇವಲ 12 ದಿನದಲ್ಲಿ ಮತ್ತೆ ಪಿಒಕೆಯಲ್ಲಿ ವಾಯುದಾಳಿ ನಡೆಸಿ ಬಾಲಾಕೋಟ್ ನಲ್ಲಿದ್ದ ಜೈಶ್ ಉಗ್ರ ಕ್ಯಾಂಪ್ ಅನ್ನು ಧ್ವಂಸ ಮಾಡಿದೆ ಎಂದು ಹೇಳಿದ್ದರು. ಇದೀಗ ಅಮಿತ್ ಶಾ ಅವರ ಈ ಹೇಳಿಕೆ ವಿಪಕ್ಷಗಳ ಟೀಕಾ ಪ್ರಹಾರಕ್ಕ ಕಾರಣವಾಗಿದ್ದು, ವಿಪಕ್ಷ ಮುಖಂಡರು ಅಮಿತ್ ಶಾ ಅವರ ಹೇಳಿಕೆಯನ್ನು ತೀಕ್ಷ್ಣವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು, ಪ್ರಧಾನಿ ಮೋದಿ ಮತ್ತು ಬಿಜೆಪಿ ಉಗ್ರ ದಾಳಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಎಂದು ಕಿಡಿಕಾರಿದರು. ಬಾಲಾಕೋಟ್ ಉಗ್ರ ದಾಳಿ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿದ ಅವರು, ವಿದೇಶಿ ಮಾಧ್ಯಮಗಳು ಪಾಕ್ ಪರ ನಿಲುವು ಹೊಂದಿವೆಯೇ... ವಾಯುದಾಳಿಯಲ್ಲಿ ಸಾವುನೋವು ಸಂಭವಿಸಿಲ್ಲ ಎಂದು ವರದಿ ಮಾಡುತ್ತಿವೆ. ಈ ಬಗ್ಗೆ ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ. ಒಂದೋ ವಿದೇಶಿ ಮಾಧ್ಯಮಗಳು ಪಾಕಿಸ್ತಾನದ ಪರವಾಗಿರಬೇಕು, ಇಲ್ಲವೇ ವಾಯುದಾಳಿ ಸಂಬಂಧ ಮೋದಿ ಹಾಗೂ ಬಿಜೆಪಿ ಸುಳ್ಳು ಹೇಳುತ್ತಿರಬೇಕು ಎಂದು ಕಿಡಿಕಾರಿದ್ದಾರೆ.
ಇದೇ ವಿಚಾರವಾಗಿ ಮಾತನಾಡಿರುವ ಟಿಎಂಸಿ ಹಿರಿಯ ಮುಖಂಡ ಡರೇಕ್ ಒಬ್ರಿಯಾನ್ ಅವರೂ ಕೂಡ ವಾಯುದಾಳಿ ಸಂಬಂಧ ಬಿಜೆಪಿ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಪೂರ್ವ ಯೋಜನೆಗಳಿಲ್ಲದೇ ಪ್ರಧಾನಿ ಮೋದಿ ಸೈನಿಕರನ್ನು ಕಳುಹಿಸುತ್ತಿದ್ದು, ಸೈನಿಕರು ಸಾಯಲೆಂದೇ ಇಂತಹ ಕೆಲಸ ಮಾಡುತ್ತಿದ್ದಾರೆಯೇ..? ಹುತಾತ್ಮ ಸೈನಿಕರ ಭಾವಚಿತ್ರಗಳನ್ನು ಬಿಜೆಪಿ ಮತ್ತು ಮೋದಿ ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿ ನಿಜಕ್ಕೂ ನಿಮಗೆ ನಾಚಿಕೆ ಎಂಬುದೇ ಇಲ್ಲ ಎಂದು ಕಿಡಿಕಾರಿದ್ದಾರೆ. ಇನ್ನು ಜಮ್ಮು-ಕಾಶ್ಮೀರ ಕಾಂಗ್ರೆಸ್ ಘಟಕದ ಅಧ್ಯಕ್ಷ ಗುಲಾಮ್ ಅಹ್ಮದ್ ಮೀರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಶಾಂತಿ ಮಾತುಗಳನ್ನಾಡುತ್ತಿದ್ದಾರೆ . ಆದರೆ ಅವರ ಮಾತು ಕೇವಲ ಮಾತಾಗಿಯೇ ಇರುವ ಬದಲು ಕೃತಿಯಾಗಬೇಕು. ಶಾಂತಿಯನ್ನು ಅವರು ಕಾರ್ಯಗತಗೊಳಿಸಿ ಆ ನಿಟ್ಟಿನಲ್ಲಿ ಭಾರತ ಸರ್ಕಾರದೊಂದಿಗೆ ದ್ವಿಪಕ್ಷೀಯ ಮಾತುಕತೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
Kapil Sibal: PM must speak on reports by int'l media that say hardly anyone died there (in airstrike in Balakot). I want to ask PM, ‘Is int'l media in support of Pak?’ When int'l media speaks against Pak,you feel elated.When they ask questions,it's asking because it supports Pak?
559 people are talking about this
Derek O'Brien, TMC: Mr. Narendra Modi,are you sending our soldiers to die without plan? Or is your purpose is only to win polls? Mr. Modi, you shamelessly reduce precious pictures of martyred jawans to use as a backdrop to your political rally. Mr. Modi, you are quite shameless.
1,034 people are talking about this
Jammu & Kashmir Pradesh Congress Committee President, Ghulam Ahmad Mir in Poonch yesterday: Imran Khan (Pakistan PM) needs to translate words into action to fight terrorism. Both (India & Pakistan) the countries, need to sit together to find a peaceful solution.
57 people are talking about this
Union Min Hardeep Puri on opposition raising questions on #AirStrike in Balakot: Airstrike was on facilities of leadership who held responsibility for #PulwamaAttack. There isn't shortage of illiterate ppl who don’t trust the country, but majority are proud of the nation. (03.03)
187 people are talking about this
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |