Urdu   /   English   /   Nawayathi

ಬೆಂಗಳೂರಿನಿಂದ ಜಮ್‍ಶೆಡ್‍ಪುರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಬೆಂಕಿ..!

share with us

ಪೂರ್ವ ಗೋದಾವರಿ: 05 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಬೆಂಗಳೂರಿನಿಂದ ಜಾರ್ಖಂಡ್‍ನ ಜೆಮ್‍ಶೆಡ್‍ಪುರಕ್ಕೆ ತೆರಳುತ್ತಿದ್ದ ಯಶವಂತಪುರ-ಟಾಟಾನಗರ್ ಸೂಪರ್‍ಫಾಸ್ಟ್ ಎಕ್ಸ್‍ಪ್ರೆಸ್ ರೈಲಿಗೆ ಬೆಂಕಿ ತಗುಲಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸಾವು-ನೋವು ಸಂಭವಿಸಿಲ್ಲವಾದರೂ, ರೈಲಿನ ಪ್ಯಾಂಟ್ರಿ (ಅಡುಗೆ ಮಾಡುವ) ಭೋಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಇಂದು 2ರ ನಸುಕಿನಲ್ಲಿ ಈ ಬೆಂಕಿ ಆಕಸ್ಮಿಕ ಸಂಭವಿಸಿದೆ. ತಕ್ಷಣ ಕಾರ್ಯಪ್ರವೃತರಾದ ಸಿಬ್ಬಂದಿ ರೈಲ್ವೆ ಎಂಜಿನಿಂದ ಪ್ಯಾಂಟ್ರಿಯನ್ನು ಬೇರ್ಪಡಿಸಿದ್ದರಿಂದ ಅಗ್ನಿಯ ಕೆನ್ನಾಲಿಗೆ ಇತರ ಬೋಗಿಗಳಿಗೂ ವ್ಯಾಪಿಸುವುದು ತಪ್ಪಿತು. ಪ್ಯಾಂಟ್ರಿಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು ವ್ಯಾಪಿಸಿತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿದ್ದರಿಂದ ಸಾವು-ನೋವು ತಪ್ಪಿದೆ.  ಈ ಘಟನೆಯಿಂದ ಈ ಮಾರ್ಗ ಇತರ ರೈಲುಗಳ ಸಂಚಾರಕ್ಕೆ ಕೆಲಕಾಲ ಅಡ್ಡಿಯಾಗಿತ್ತು. ರೈಲಿನ ಪ್ಯಾಂಟ್ರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಎಂಬುವುದು ಮಾತ್ರ ಇನ್ನೂ ತಿಳಿದು ಬಂದಿಲ್ಲ. ಆದರೆ ಸಿಬ್ಬಂದಿ ಹಾಗೂ ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ಸಂಭವಿಸಲಿದ್ದ ಬಹುದೊಡ್ಡ ದುರಂತವೊಂದನ್ನು ತಪ್ಪಿಸಿದ್ದಾರೆ. ಬೆಂಕಿ ಕಿಡಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಮೊದಲು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ಬಳಿಕ ಬೆಂಕಿ ಹೊತ್ತಿಕೊಂಡಿದ್ದ ಪ್ಯಾಂಟ್ರಿಯನ್ನು ರೈಲಿನಿಂದ ಬೇರ್ಪಡಿಲಾಗಿದೆ. ಇದರಿಂದ ಬೆಂಕಿ ಇತರ ಬೋಗಿಗಳಿಗೆ ಹರಡುವುದು ತಪ್ಪಿದೆ. ಹೀಗೆ ಸಿಬ್ಬಂದಿ ಹಾಗೂ ಪ್ರಯಾಣಿಕರ ಜವಾಬ್ದಾರಿಯುತ ನಡೆ ರೈಲು ದುರಂತವನ್ನು ತಡೆದಿದೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೆ ಪ್ಯಾಂಟ್ರಿ ಕಾರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಈ, ಸಂ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا