Urdu   /   English   /   Nawayathi

ಫ್ಯಾಕ್ಟ್ ಚೆಕ್: ಕಿಸಾನ್ ಸಮ್ಮಾನ್ ಯೋಜನೆ ಬಗ್ಗೆ ಪ್ರಧಾನಿ ಮೋದಿ ಆರೋಪ; ಅಂಕಿಅಂಶ ಹೇಳುವುದೇ ಬೇರೆ!

share with us

ರಾಯಚೂರು: 06 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವ ಭರದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಬುಧವಾರ ರಾಜ್ಯದ ರೈತರಿಗೆ ಸುಳ್ಳು ಹೇಳಿದ್ದಾರೆ. ಇಂದು ಕಲಬುರಗಿಯಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಾಜ್ಯದ ಸಣ್ಣ ಮತ್ತು ಮಧ್ಯಮ ರೈತರ ಮಾಹಿತಿ ನೀಡಲು ವಿಫಲವಾಗಿದೆ. ಹೀಗಾಗಿಯೇ ಇಲ್ಲಿನ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಲಾಭ ಸಿಕ್ಕಿಲ್ಲ ಎಂದು ದೂರಿದರು. ಪ್ರಧಾನಿ ಹೇಳಿಕೆ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರರು ಫ್ಯಾಕ್ಟ್ ಚೆಕ್ ಮಾಡಿದ್ದು, ರಾಯಚೂರು ಜಿಲ್ಲೆಯಲ್ಲಿ ಒಟ್ಟು 54, 926 ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಹರಾಗಿದ್ದು, 4 ಸಾವಿರ ರೈತರ ಖಾತೆಗ ಈಗಾಗಲೇ ಹಣ ಜಮೆಯಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ಕಿಸಾನ್ ಸಮ್ಮಾನ್ ಯೋಜನೆಗೆ ಸಂಬಂಧಿಸಿದಂತೆ ಒಟ್ಟು 2.20.000 ಸಣ್ಣ ಮತ್ತು ಮಧ್ಯಮ ರೈತರನ್ನು ಗುರುತಿಸಲಾಗಿದ್ದು, ಈ ಪೈಕಿ 84,961 ರೈತರ ವಿವರ ನೀಡಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ. ಈಗಾಗಲೇ ಜಿಲ್ಲೆಯ 4000 ರೈತರು ಕಿಸಾನ್ ಸಮ್ಮಾನ್ ಯೋಜನೆಯ ಲಾಭ ಪಡೆದಿದ್ದು, ಅವರ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರುಪಾಯಿ ಜಮೆ ಆಗಿದೆ. ಈ ಕುರಿತು ಅವರ ಮೊಬೈಲ್ ಸಂದೇಶ ಸಹ ಕಳುಹಿಸಿರುವುದು ಮೂರು ದಿನಗಳ ಹಿಂದಷ್ಟೇ ನಡೆದ ರಾಜ್ಯ ಮಟ್ಟದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ತಿಳಿಸಲಾಗಿತ್ತು. ಅಲ್ಲದೆ ರಾಯಚೂರು ಜಿಲ್ಲಾ ಕೃಷಿ ಜಂಟಿ ನಿರ್ದೇಶಕರು ಸಹ ಇದನ್ನು ಖಚಿತಪಡಿಸಿದ್ದಾರೆ. ಇನ್ನು ಕಲಬುರಗಿ ಜಿಲ್ಲೆಯಲ್ಲೂ ಕಿಸಾನ್ ಸಮ್ಮಾನ್ ಯೋಜನೆಗೆ 32 ಸಾವಿರ ರೈತರನ್ನು ಗುರುತಿಸಲಾಗಿದೆ. ಆದರೆ ಅವರ ಬ್ಯಾಂಕ್ ಖಾತೆಗೆ ಹಣ ಜಮೆಯಾದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಿತೇಂದ್ರ ನಾತ್ ಸೂಗುರು ಅವರು ಹೇಳಿದ್ದಾರೆ. "ರಾಜ್ಯ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನೀಡಬೇಕಿತ್ತು. ಆದರೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ರೈತರ ಪಟ್ಟಿ ಇನ್ನೂ ಸಿಕ್ಕಿಲ್ಲ. ಹಲವು ರಾಜ್ಯಗಳ ರೈತರ ಬ್ಯಾಂಕ್ ಖಾತೆಗಳಿಗೆ ಈಗಾಗಲೇ ಕಿಸಾನ್ ಸಮ್ಮಾನ್ ಯೋಜನೆಯ ಹಣ ತಲುಪಿದೆ. ಆದರೆ ರಾಜ್ಯದ ರೈತರಿಗೆ ಇನ್ನೂ ಸಿಕ್ಕಿಲ್ಲ. ಇದಕ್ಕೆಲ್ಲಾ ಕಾರಣ ರಾಜ್ಯದಲ್ಲಿರುವ ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ ಹಾಗೂ ಅಧಿಕಾರ ದಾಹ ಹೊಂದಿರುವ ಕಾಂಗ್ರೆಸ್" ಎಂದು ಮೋದಿ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا