Urdu   /   English   /   Nawayathi

ಪ್ರೇಮ ವಿವಾಹವಾದ ಮಗಳನ್ನು ಬಲವಂತವಾಗಿ ಕರೆದೊಯ್ಯಲು ಪೋಷಕರ ವಿಫಲ ಯತ್ನ: ಆರೋಪ

share with us

ಕೊಪ್ಪಳ: 17 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಪ್ರೇಮ ವಿವಾಹವಾಗಿರುವ ಮಗಳನ್ನು ಆಕೆಯ ಮನೆಯವರು ಬಲವಂತವಾಗಿ ಕರೆದುಕೊಂಡು ಹೋಗಲು ಯತ್ನಿಸಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿ ನಗರದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಪ್ರಗತಿ ನಗರದ ರಮೇಶ ಈ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರೇಮಾಂಕರವಾಗಿ ಕಳೆದ 8 ತಿಂಗಳ ಹಿಂದೆ ಮದುವೆಯಾಗಿದ್ದರು. ಈ ಮದುವೆಗೆ ಯುವತಿಯ ಮನೆಯವರು ಒಪ್ಪಿಗೆ ನೀಡಿರಲ್ಲ. ಹೀಗಾಗಿ, ಯುವತಿಯನ್ನು ಕರೆದೊಯ್ಯಲು ಹುಡುಗಿಯ ಮನೆಯವರು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ ಎಂದು ರಮೇಶ ಆರೋಪಿಸಿದ್ದಾನೆ. ಇಂದು ಮಧ್ಯಾಹ್ನದ ವೇಳೆಗೆ ಯುವತಿ ತಂದೆ ಹಾಗೂ ಇನ್ನಿತರ ಎಂಟರಿಂದ 10 ಜನರ ಗುಂಪು ಎರಡು ಕಾರ್​ನಲ್ಲಿ ಪ್ರಗತಿ ನಗರಕ್ಕೆ ಬಂದಿದ್ದಾರೆ. ಯುವತಿಯನ್ನು ಬಲವಂತವಾಗಿ ಕರೆದೊಯ್ಯಲು ಪ್ರಯತ್ನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ನೆರವಿನೊಂದಿಗೆ ಪಾರಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪ್ರೇಮ ವಿವಾಹವಾಗಿರುವ ಜೋಡಿಯು ರಕ್ಷಣೆ ಕೋರಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ದೌಡಾಯಿಸಿದ್ದಾರೆ. 

ಈ, ಇ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا