Urdu   /   English   /   Nawayathi

ಹುಬ್ಬಳ್ಳಿಯಲ್ಲಿ ಸುಪ್ರೀಂಕೋರ್ಟ್ ವಕೀಲರಿಂದ 2.40 ಲಕ್ಷ ರೂ. ಜಪ್ತಿ!

share with us

ಹುಬ್ಬಳ್ಳಿ: 17 ಮಾರ್ಚ್ (ಫಿಕ್ರೋಖಬರ್ ಸುದ್ದಿ) ನಗರದ ವಿಮಾನ ನಿಲ್ದಾಣದಲ್ಲಿ ಸುಪ್ರೀಂಕೋರ್ಟ್ ವಕೀಲರೊಬ್ಬರಿಂದ ಸೂಕ್ತ ದಾಖಲಾತಿ ಇಲ್ಲದ 2.40 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದೆಹಲಿ ಮೂಲದ ಸುಪ್ರೀಂ ಕೋರ್ಟ್ ವಕೀಲ ನಿತಿನ್ ದೇವರಾಜ ಅವರಿಂದ ಹಣ ಜಪ್ತಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಇವರು, ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ದೆಹಲಿಗೆ ತೆರಳುತ್ತಿದ್ದರು. ಅವರ ಬಳಿ ಸೂಕ್ತ ದಾಖಲಾತಿಗಳಿಲ್ಲದ 2.40 ಲಕ್ಷ ರೂ. ನಗದು ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ ಚುನಾವಣಾಧಿಕಾರಿ ರಮೇಶ ದೇಸಾಯಿ ಹಾಗೂ ಫ್ಲೈಯಿಂಗ್ ಸ್ಕ್ವಾಡ್‌ನ ಯತ್ನಳ್ಳಿ ಸಿಬ್ಬಂದಿಯೊಂದಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ವಕೀಲರನ್ನು ಪರಿಶೀಲನೆಗೊಳಪಡಿಸಿದಾಗ ಹಣ ಪತ್ತೆಯಾಗಿದೆ. 
ಪತ್ತೆಯಾಗಿರುವ ಹಣದ ಬಗ್ಗೆ ಸೂಕ್ತ ದಾಖಲಾತಿಗಳಿಲ್ಲದ ಕಾರಣ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿ ಆದಾಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا