Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೈಂದೂರು: 18 ಮಾರ್ಚ್ (ಫಿಕ್ರೋಖಬರ್ ಸುದ್ದಿ) ತ್ರಾಸಿ- ಹೊಸಪೇಟೆ- ಕಂಚುಗೋಡು ಕಡಲ ತೀರದಲ್ಲಿ ಸಾಮಾನ್ಯವಾಗಿ ಮಳೆಗಾಲದಲ್ಲಿ ಉಂಟಾಗುವ ಕಡಲ್ಕೊರೆತ ಈಗ ಕಾಣಿಸಿಕೊಂಡಿರುವುದು ಅಲ್ಲಿನ ತೀರ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಗುರುವಾರ ಸಣ್ಣ ಮಟ್ಟದಲ್ಲಿ ಕಾಣಿಸಿಕೊಂಡಿದ್ದ ಕೊರೆತ ಅದೇ ವೇಗದಲ್ಲಿ ಮುಂದುವರಿದ ಕಾರಣ ಕೊರೆತಕ್ಕೆ ಈಡಾದ ಭಾಗ ಹೆಚ್ಚುತ್ತಿದೆ. ಸುಮಾರು 200 ಮೀಟರ್ ಉದ್ದದ ಕಡಲ ತೀರ ಸಮುದ್ರ ಪಾಲಾಗಿದೆ. ಕಡಲ ತೀರದಲ್ಲಿರುವ ಗಾಳಿ ಮತ್ತು ಅನ್ಯ ಮರಗಳು ಒಂದೊಂದಾಗಿ ಉರುಳುತ್ತಿವೆ. ಈ ಭಾಗದಲ್ಲಿ 200ಕ್ಕೂ ಮಿಕ್ಕಿ ಮೀನುಗಾರಿಕಾ ದೋಣಿಗಳನ್ನು ಇಡಲಾಗುತ್ತಿದ್ದು, ಕೊರೆತದ ಕಾರಣದಿಂದ ದೋಣಿ, ಬಲೆ ಹಾಗೂ ಎಂಜಿನ್ಗಳಿಗೆ ಹಾನಿಯಾಗಿದೆ. ಅಪಾಯಕ್ಕೆ ಒಳಗಾಗಬಹುದಾದ ದೋಣಿಗಳನ್ನು ದಡದ ಮೇಲಕ್ಕೆ ಸರಿಸಲಾಗಿದ್ದು, ಕೊರೆತ ಮುಂದೊತ್ತುವ ಅಪಾಯವಿರುವುದರಿಂದ ಎಲ್ಲ ದೋಣಿಗಳನ್ನು ಸ್ಥಳಾಂತರಿಸಬೇಕಾದ ಅನಿವಾರ್ಯತೆ ಇದೆ ಎಂದು ಮೀನುಗಾರರು ಭಾವಿಸಿದ್ದಾರೆ. ಕೊರೆತ ಮುಂದುವರಿದರೆ ಹತ್ತಿರದ ಮನೆಗಳಿಗೂ ಅಪಾಯ ತಟ್ಟುವ ಸಾಧ್ಯತೆ ಇದೆ. ಈ ಅಕಾಲಿಕ ಕಡಲ್ಕೊರೆತಕ್ಕೆ ಮರವಂತೆ- ತ್ರಾಸಿ ತೀರದಲ್ಲಿ ನಡೆಯುತ್ತಿರುವ ಸುಸ್ಥಿರ ಕಡಲ ತೀರ ನಿರ್ವಹಣಾ ಯೋಜನೆ ಕಾರಣ ಎಂದು ಮೀನುಗಾರರು ಶಂಕಿಸುತ್ತಿದ್ದಾರೆ. ತ್ರಾಸಿ ಉದ್ಯಾನವನದ ಸಮೀಪ ಯೋಜನೆಯ ಕೊನೆಯ ಗ್ರೋಯಿನ್ ನಿರ್ಮಿಸಲಾಗಿದೆ. ಅದರ ದಕ್ಷಿಣ ದಿಕ್ಕಿನಲ್ಲಿ ಕೊರೆತ ಸಂಭವಿಸಿದೆ. ಇಲ್ಲಿಂದ ನೂರು ಮೀಟರ್ ದೂರದಲ್ಲಿ ಇನ್ನೊಂದು ಗ್ರೋಯಿನ್ ನಿರ್ಮಿಸಬೇಕೆಂದು ಸ್ಥಳೀಯ ಮೀನುಗಾರರು ಒತ್ತಾಯಿಸಿದ್ದಾರೆ.
ಆರಂಭವಾಗದ ಕಾಮಗಾರಿ: ತ್ರಾಸಿ ಉದ್ಯಾನವದ ಬಳಿ ದಕ್ಷಿಣ ದಿಕ್ಕಿನಲ್ಲಿ ಕಡಲ್ಕೊರೆತ ತಡೆಯುವ ಉದ್ದೇಶದಿಂದ ಭಾರಿ ಗಾತ್ರದ ಕಲ್ಲುಗಳನ್ನು ಹಾಕಿ ವರ್ಷಗಳು ಕಳೆದಿದ್ದರೂ, ಈವರೆಗೆ ಶಾಶ್ವತ ತಡೆಗೋಡೆ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ತ್ರಾಸಿ- ಹೊಸಪೇಟೆ ಪ್ರದೇಶದಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈವರೆಗೆ ಮಂಜೂರಾತಿ ದೊರೆತಿಲ್ಲ. ಹೀಗಾಗಿ ಕಾಮಗಾರಿ ಪ್ರಾರಂಭವಾಗಿಲ್ಲ ಎಂಬ ಉತ್ತರ ಬಂದರು ಇಲಾಖೆಯ ಅಧಿಕಾರಿಗಳಿಂದ ಸಿಗುತ್ತಿದೆ. ಬೇಸಿಗೆಯಲ್ಲಿ ಕಾಣಿಸಿಕೊಂಡಿರುವ ಈ ಕಡಲ್ಕೊರೆತ ತಡೆಯಲು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |