Urdu   /   English   /   Nawayathi

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಡಿಕ್ಕಿ... ಸ್ಥಳದಲ್ಲೇ ಮೃತಪಟ್ಟ ನಾಲ್ವರು ರೈತರು!

share with us

ಅನಂತಪುರಂ: 19 ಮಾರ್ಚ್ (ಫಿಕ್ರೋಖಬರ್ ಸುದ್ದಿ) ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈತರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಪೆದವಡುಗೂರು ತಾಲೂಕಿನ ಗುತ್ತಿ ಅನಂತಪುರಂ ಗ್ರಾಮದ ಬಳಿ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪರಿಸ್ಥಿತಿ ಚಿಂತಾಜನಕವಾಗಿದೆ. ಗುಂಟೂರು ಜಿಲ್ಲೆ ನರಸರಾವುಪೇಟ್​ಗೆ ಸೇರಿದ್ದ ನಾಲ್ವರು ರೈತರು ಕೆಲಸ ನಿಮಿತ್ತ ಅನಂತಪುರಂಗೆ ತೆರಳಿದ್ದಾರೆ. ಡೋನ್​ವರೆಗೆ ರೈಲಿನಿಂದ ಬಂದ ರೈತರು ಸೋಮವಾರ ರಾತ್ರಿ ಅನಂತಪುರಂಗೆ ತೆರಳಲು ಆ್ಯಂಬುಲೆನ್ಸ್​ನಲ್ಲಿ ಪ್ರಯಾಣ ಬೆಳಸಿದ್ದಾರೆ. ಮಂಗಳವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ನಾಲ್ವರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡ್ರೈವರ್​ಗೆ ತೀವ್ರ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا