Urdu   /   English   /   Nawayathi

ತೀವ್ರ ಬರ: 38 ಕೋಟಿ ಬಿಡುಗಡೆ

share with us

ಬೆಂಗಳೂರು: 21 ಮಾರ್ಚ್ (ಫಿಕ್ರೋಖಬರ್ ಸುದ್ದಿ) ತೀವ್ರ ಬರ ಎದುರಿಸುತ್ತಿರುವ 10 ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಒಟ್ಟು 38 ಕೋಟಿ ಬಿಡುಗಡೆ ಮಾಡಿದೆ. ವಿಜಯಪುರ, ದಾವಣಗೆರೆ, ಹಾಸನ, ಕೊಪ್ಪಳ (ತಲಾ 5 ಕೋಟಿ), ಚಿತ್ರದುರ್ಗ, ಕಲಬುರ್ಗಿ, ಗದಗ, ಕೋಲಾರ, ರಾಮನಗರ, ಯಾದಗರಿ (ತಲಾ 3 ಕೋಟಿ) ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಬರ ಪರಿಹಾರ ಕಾರ್ಯಗಳಿಗೆ ರಾಜ್ಯ ಪರಿಹಾರ ವಿಪತ್ತು ಪರಿಹಾರ ನಿಧಿಯಿಂದ ಈ ಹಣ ನೀಡಲಾಗಿದೆ. ಅನುದಾನವನ್ನು ತುರ್ತು ಕುಡಿಯುವ ನೀರಿನ ಪೂರೈಕೆ ಮತ್ತು ಜಾನುವಾರು ಸಂರಕ್ಷಣೆಗೆ ವೆಚ್ಚ ಮಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಪ್ರಸಕ್ತ ವರ್ಷ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಮಳೆ ಕೊರತೆಯಿಂದ ರಾಜ್ಯದ 162 ತಾಲ್ಲೂಕುಗಳನ್ನು ಬರ‍ಪೀಡಿತ ಎಂದು ಘೋಷಿಸಲಾಗಿದೆ. ಈ ತಾಲ್ಲೂಕುಗಳಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಮತ್ತು ಮೇವು ಸಮಸ್ಯೆ ತೀವ್ರಗೊಂಡಿತ್ತು. ಇದೀಗ ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ. ಹೀಗಾಗಿ, ಬರ ಪೀಡಿತ ಪ್ರದೇಶಗಳಿಗೆ ತುರ್ತು ಆಗಿ ಹಣದ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿಗಳು ಬೇಡಿಕೆ ಸಲ್ಲಿಸಿದ್ದರು. ಈ ಬೇಡಿಕೆಗೆ ಪೂರಕವಾಗಿ ಸರ್ಕಾರ ಹಣ ಬಿಡುಗಡೆ ಮಾಡಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا