Urdu   /   English   /   Nawayathi

ಮಹಿಳೆಯೊಂದಿಗೆ ಸೆಲ್ಫಿ ತೆಗೆದು ಅವಮಾನಿಸಿ ಪೋಸ್ಟ್ ಮಾಡಿದ ಕಿಡಿಗೇಡಿಗೆ ಚಪ್ಪಲಿ ಏಟು...!

share with us

ಬೀದರ್: 23 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಪ್ರತಿಭಟನಾನಿರತ ಅಂಗನವಾಡಿ ಕಾರ್ಯಕರ್ತೆಯೊಬ್ಬರೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದ ಸಮಾಜ ಸೇವಕನೊಬ್ಬನಿಗೆ ಮಹಿಳೆಯರು ಚಪ್ಪಲಿಯಿಂದ ಥಳಿಸಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಜಿಲ್ಲಾ ಪಂಚಾಯತ್​ ಆವರಣದಲ್ಲಿ ಎನ್​ಜಿಓ ಸಂಸ್ಥೆ ಮಾಡಿಕೊಂಡು ಅಲ್ಲಲ್ಲಿ ಗುರುತಿಸಿಕೊಂಡ ಜ್ಞಾನೇಶ್ ಕುಮಾರ್ ಹೀಗೆ ಚಪ್ಪಲಿ ಏಟು ತಿಂದ ವ್ಯಕ್ತಿ.

ಘಟನೆ ಹಿನ್ನೆಲೆ:

ಕಳೆದ ವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾಗ ಮಹಿಳೆಯೊಬ್ಬರ ಜತೆ ಸೆಲ್ಫಿ ತೆಗೆದುಕೊಂಡಿದ್ದಾನೆ. ನಂತರ ಆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸುವ ರೀತಿಯಲ್ಲಿ ಬಿಂಬಿಸಿದ್ದಾನೆ. ಇದರಿಂದ ಕೆರಳಿದ ಮಹಿಳೆಯರು ಮಾರನೇ ದಿನ ಜಿಲ್ಲಾ ಪಂಚಾಯತ್​ ಆವರಣದಲ್ಲಿ ಆತ ಕೈಗೆ ಸಿಗ್ತಿದ್ದಂತೆ ಕಾಲಲ್ಲಿದ್ದ ಚಪ್ಪಲಿ ತೆಗೆದು ಥಳಿಸಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا