Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 26 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಆರ್ ಬಿಐ ಗೌರ್ನರ್ ಶಕ್ತಕಾಂತ ದಾಸ್ ನೇಮಕಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ನಿರಾಕರಿಸಿದೆ. ಮಂತ್ರಿಗಳು, ಕಾರ್ಯದರ್ಶಿಗಳು ಮತ್ತು ಇತರಅಧಿಕಾರಿಗಳನ್ನೊಳಗೊಂಡ ದಾಖಲೆಗಳನ್ನು ಹಂಚಿಕೊಳ್ಳುವುದು ಪಾರದರ್ಶಕ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಲಾಗಿದೆ. ಕಿರುಪಟ್ಟಿಯಲ್ಲಿನ ಅಭ್ಯರ್ಥಿಗಳ ಹೆಸರುಗಳು ಮತ್ತು ನೇಮಕಾತಿಗೆ ಸಂಬಂಧಿಸಿದ ಕಡತಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತಿಲ್ಲ ಎಂದು ಆರ್ ಟಿಐ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಡಿಸೆಂಬರ್ 11, 2018 ರಲ್ಲಿ ಆರ್ ಬಿಐ ಗೌರ್ನರ್ ಆಗಿ ಶಕ್ತಿ ಕಾಂತ ದಾಸ್ ಅವರನ್ನು ಮೂರು ವರ್ಷಗಳ ಅವಧಿಗೆ ನೇಮಕಗೊಳಿಸಿತ್ತು. ಉರ್ಜಿತ್ ಪಟೇಲ್ ದಿಢೀರನೇ ರಾಜೀನಾಮೆ ನೀಡಿದ ನಂತರ ಶಶಿಕಾಂತ ದಾಸ್ ಅವರನ್ನು ನೇಮಕ ಮಾಡಲಾಗಿತ್ತು. ಆರ್ ಬಿಐ ಗೌರ್ನರ್ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಜಾಹಿರಾತು, ಸುತ್ತೋಲೆ ಬಗ್ಗೆ ಮಾಹಿತಿ ನೀಡುವಂತೆ ಹಣಕಾಸು ಇಲಾಖೆಯ ಪ್ರತಿನಿಧಿಯೊಬ್ಬರು ಆರ್ ಟಿಐ ಅರ್ಜಿ ಸಲ್ಲಿಸಿದ್ದರು. ಹಣಕಾಸು ಸೇವಾ ನಿಯಂತ್ರಣ ನೇಮಕ ಶೋಧನಾ ಸಮಿತಿ-ಎಫ್ ಎಸ್ ಆರ್ ಎಎಸ್ ಸಿ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸಂಪುಟ ಆರ್ ಬಿಐ ಗೌರ್ನರ್ ಆಕ್ಯೆ ಮಾಡುತ್ತದೆ ಎಂದು ಹಣಕಾಸು ಸೇವಾ ಇಲಾಖೆ ತಿಳಿಸಿದೆ. ಸಂಪುಟ ಕಾರ್ಯದರ್ಶಿ ಈ ಸಮಿತಿ ಅಧ್ಯಕ್ಷರಾಗಿದ್ದು, ಪ್ರಧಾನ ಮಂತ್ರಿಗಳ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖೆಯ ಕಾರ್ಯದರ್ಶಿ ಹಾಗೂ ಹೊರಗಿನ ಮೂವರು ತಜ್ಞರು ಇದರ ಸದಸ್ಯರಾಗಿರುತ್ತಾರೆ. ಶಕ್ತಿಕಾಂತ್ ದಾಸ್ 1980 ರ ಬ್ಯಾಚಿನ ತಮಿಳುನಾಡು ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಮೇ 2017ರಂದು ನಿವೃತ್ತಿಯಾಗಿದ್ದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |