Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 26 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಜೆಟ್ ಏರ್ ವೇಸ್ ವೈಮಾನಿಕ ಸಂಸ್ಥೆಯ ಆರ್ಥಿಕ ನಷ್ಟಕ್ಕೆ ಸಂಬಂಧಿಸಿದಂತೆ ಎನ್ ಡಿಎ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಬ್ಯಾಂಕುಗಳು ದ್ವಿಮುಖ ನೀತಿ ಅನುಸರಿಸುತ್ತಿವೆ ಎಂದು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವಿಟ್ ಪ್ರಕಟಿಸಿರುವ ವಿಜಯ್ ಮಲ್ಯ, ಆರ್ಥಿಕ ನಷ್ಟದಲ್ಲಿರುವ ಜೆಟ್ ಏರ್ ವೇಸ್ ಸಂಸ್ಥೆಯ ಮೇಲ್ವಿಚಾರಣೆಯನ್ನು ಭಾರತೀಯ ಸ್ಟೇಟ್ ಬ್ಯಾಂಕ್ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಜೆಟ್ ಏರ್ ವೇಸ್ ಉದ್ಯೋಗಗಳು, ಸಂಪರ್ಕತೆ ಮತ್ತು ಉದ್ಯಮಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸಾರ್ವಜನಿಕ ಬ್ಯಾಂಕುಗಳು ಆರ್ಥಿಕ ಸಮಸ್ಯೆಯನ್ನು ಬಗೆಹರಿಸಲಿವೆ ಎಂಬುದುನ್ನು ಸಂತೋಷದಿಂದ ನೋಡುತ್ತಿರುವುದಾಗಿ ಮತ್ತೊಂದು ಟ್ವೀಟ್ ಮಾಡಿದ್ದಾರೆ. ಕಿಂಗ್ ಪಿಶರ್ ಮತ್ತು ಜೆಟ್ ಏರ್ ಲೈನ್ಸ್ ಕಂಪನಿಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಬೇರೆ ರೀತಿಯಲ್ಲಿ ನೋಡುತ್ತಿದೆ. ಕಿಂಗ್ ಪಿಶರ್ ಏರ್ ಲೈನ್ಸ್ ಸಂಸ್ಥೆ ಹಾಗೂ ಅಲ್ಲಿನ ಉದ್ಯೋಗಿಗಳನ್ನು ರಕ್ಷಿಸಲು 4 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಿರುವುದಾಗಿ ವಿಜಯ್ ಮಲ್ಯ ಹೇಳಿದ್ದಾರೆ. ಸಾರ್ವಜನಿಕ ಬ್ಯಾಂಕುಗಳು ಹಾಗೂ ಇತರ ಬ್ಯಾಂಕುಗಳಿಂದ ಪಡೆದಿರುವ ಸಾಲ ಮರುಪಾವತಿಸಲು ಕರ್ನಾಟಕ ಹೈಕೋರ್ಟ್ ಮುಂದೆ ತನ್ನ ಆಸ್ತಿಯ ಒಟ್ಟು ಮೌಲ್ಯದ ಬಗ್ಗೆ ಮಾಹಿತಿ ಇದ್ದು, ಬ್ಯಾಂಕುಗಳು ಏಕೆ ನನ್ನ ಹಣವನ್ನು ತೆಗೆದುಕೊಳ್ಳಬಾರದು ಇದರಿಂದ ಜೆಟ್ ಏರ್ ವೇಸ್ ಕಂಪನಿ ರಕ್ಷಿಸಲು ಸಾಧ್ಯವಾಗಲಿದೆ ಎಂದು ವಿಜಯ್ ಮಲ್ಯ ಕೇಳಿಕೊಂಡಿದ್ದಾರೆ.
And I repeat once again that I have placed liquid assets before the Hon’ble Karnataka High Court to pay off the PSU Banks and all other creditors. Why do the Banks not take my money. It will help them to save Jet Airways if nothing else.
617 people are talking about this
ಅಂದಾಜು 9 ಸಾವಿರ ಕೋಟಿ ಹಣ ವಂಚನೆ ಪ್ರಕರಣದಲ್ಲಿ ವಿಜಯ್ ಮಲ್ಯ ಲಂಡನ್ ನಲ್ಲಿದ್ದು, ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಗೃಹ ಕಾರ್ಯದರ್ಶಿ ಅನುಮತಿ ನೀಡಿರುವುದನ್ನು ವಿರೋಧಿಸಿ ಅಲ್ಲಿನ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |