Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಕೋಯಿಕ್ಕೋಡ್: 08 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ತ್ರಿಶ್ಶೂರ್ ಜಿಲ್ಲಾಧಿಕಾರಿ ಟಿ.ವಿ ಅನುಪಮಾ ಐಎಎಸ್ ವಿರುದ್ಧ ಕೇರಳ ಬಿಜೆಪಿ ವಿಚಾರವಂತರ ಘಟಕದ ಸಂಚಾಲಕ ಟಿ.ಜಿ. ಮೋಹನ್ ದಾಸ್ ಮತೀಯ ದ್ವೇಷದ ಟ್ವೀಟ್ ಮಾಡಿದ್ದಾರೆ. ತ್ರಿಶ್ಶೂರ್ ಜಿಲ್ಲಾಧಿಕಾರಿ ಎಂದಿಗೂ ಗುರುವಾಯೂರ್ ದೇವಸ್ವಂ ಆಡಳಿತ ಮಂಡಳಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿದ್ದಾರೆ. ಹಾಗಾಗಿ ತ್ರಿಶ್ಶೂರ್ ಜಿಲ್ಲೆಯಲ್ಲಿ ಹಿಂದೂ ಧರ್ಮಕ್ಕೆ ಸೇರಿದವರನ್ನು ಮಾತ್ರ ಜಿಲ್ಲಾಧಿಕಾರಿಯನ್ನಾಗಿ ನೇಮಿಸಬೇಕು.ಅನುಪಮಾ ಕ್ರೈಸ್ತ ಧರ್ಮದವರಾಗಿದ್ದರೆ ಅವರನ್ನು ತಕ್ಷಣವೇ ವರ್ಗ ಮಾಡಿ.
തൃശ്ശൂർ ജില്ലാ കളക്ടർ എപ്പോഴും ഗുരുവായൂർ ദേവസ്വം ഭരണസമിതിയിൽ സർക്കാർ പ്രതിനിധിയാണ്. അതിനാൽ തൃശ്ശൂർ ജില്ലയിൽ ഹിന്ദുവിനെ മാത്രമാണ് കളക്ടറായി വെയ്ക്കാറുള്ളത്. അനുപമ കൃസ്ത്യാനിയാണെങ്കിൽ ഉടനെ മാറ്റേണ്ടതാണ്
146 people are talking about this
അനുപമ കൃസ്ത്യാനിയാണോ? ആണെങ്കിൽ ഗുരുവായൂർ ദേവസ്വം ഭരണസമിതിയിൽ നിന്ന് രാജിവെയ്ക്കണം. ഇപ്പോൾ.. ഈ നിമിഷം...
131 people are talking about this
ಅನುಪಮಾ ಕ್ರೈಸ್ತ ಧರ್ಮದವರೇ? ಆಗಿದ್ದರೆ ಗುರುವಾಯೂರ್ ದೇವಸ್ವಂ ಆಡಳಿತ ಸಮಿತಿಯಿಂದ ಈ ನಿಮಿಷವೇ ರಾಜೀನಾಮೆ ನೀಡಿ ಹೊರನಡೆಯಬೇಕು ಎಂದು ಮೋಹನ್ ದಾಸ್ ಟ್ವೀಟಿಸಿದ್ದಾರೆ. ಶಬರಿಮಲೆ ಅಯ್ಯಪ್ಪನ ಹೆಸರು ಹೇಳಿ ಮತ ಯಾಚಿಸಿದ್ದಕ್ಕಾಗಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿಗೆ ರಿಟರ್ನಿಂಗ್ ಅಧಿಕಾರಿಯಾಗಿರುವ ಅನುಪಮಾ ನೋಟಿಸ್ ನೀಡಿದ್ದರು. ಇದಾದ ನಂತರ ಅನುಪಮಾ ವಿರುದ್ಧ ಫೇಸ್ಬುಕ್ನಲ್ಲಿ ವಾಗ್ದಾಳಿಗಳು ನಡೆದಿವೆ. ಜಿಲ್ಲಾಧಿಕಾರಿ ಅನುಪಮಾ ಅವರನ್ನು ವಿರೋಧಿಸಿ ನಟಿ ಅನುಪಮಾ ಅವರ ಫೇಸ್ಬುಕ್ನಲ್ಲಿ ಕಾಮೆಂಟ್ ದಾಳಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿಗೆ ತ್ರಿಶ್ಶೂರ್ ಜಿಲ್ಲಾಧಿಕಾರಿ ಟಿ.ವಿ ಅನುಪಮಾ ನೋಟಿಸ್ ನೀಡಿದ್ದಕ್ಕೆ ಸಿಟ್ಟುಗೊಂಡ ಬಿಜೆಪಿ ಬೆಂಬಲಿಗರು ನಟಿ ಅನುಪಮಾ ಪರಮೇಶ್ವರನ್ ಅವರ ಫೇಸ್ಬುಕ್ ಪುಟದಲ್ಲಿ ಕೆಟ್ಟ ಕಾಮೆಂಟ್ ಮಾಡಿ ದಾಳಿ ನಡೆಸಿದ್ದಾರೆ.
ನಟಿ ಅನುಪಮಾ ಅವರ ಫೇಸ್ಬುಕ್ ಪುಟದಲ್ಲಿ ಕೆಟ್ಟ ರೀತಿಯ ಬೈಗುಳ ಜತೆ ಸ್ವಾಮಿ ಶರಣಂ ಅಯ್ಯಪ್ಪ ಎಂಬ ಕಾಮೆಂಟ್ಗಳು ಜಾಸ್ತಿ ಇವೆ. ಸುರೇಶ್ ಗೋಪಿಯನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಡದಿದ್ದರೆ, ಜಿಲ್ಲಾಧಿಕಾರಿ ಸ್ಥಾನದಿಂದಲೇ ನಿಮ್ಮನ್ನು ಕೆಳಗಿಳಿಸುತ್ತೇವೆ ಬಿಜೆಪಿ ತಂಟೆಗೆ ಬಂದರೆ ಜೋಕೆ ಎಂಬ ಬೆದಿರಿಕೆ ಕಾಮೆಂಟ್ಗಳು ಇಲ್ಲಿವೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |