Urdu   /   English   /   Nawayathi

ಉಡುಪಿ: ಪರಿಸರ ಸಂರಕ್ಷಣಾ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದವರ ಬಂಧನ

share with us

ಉಡುಪಿ: 09 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ನೆಲ ಜನ ಪರಿಸರ ಸಂರಕ್ಷಣಾ ವೇದಿಕೆ ಹೆಸರಿನಲ್ಲಿ ಹಾಗೂ ಪರಿಸರ ಸಂರಕ್ಷಣೆ ನೆಪದಲ್ಲಿ ಕೆಲವರು ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದರು. ಇವರನ್ನು ಕೋಟ ಪೋಲೀಸರು ಇಂದು ಬಂಧಿಸಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯಲ್ಲಿರುವ ಗರಿಕೆಮಠದ ಬಳಿ ಪರಿಸರ ಸಂರಕ್ಷಣಾ ವೇದಿಕೆಯ ಕೆಲವರು ಮುಖ್ಯಸ್ಥರು ಲಾರಿಗಳನ್ನು ಅಡ್ಡಗಟ್ಟಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಮತ್ತು ಲಾರಿ ಚಾಲಕರು ತಕ್ಷಣ ಕೋಟ ಪೋಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ತಲುಪಿದ ಕೋಟ ಪೋಲೀಸರು ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ ನಿತ್ಯಾನಂದ ಮತ್ತು ಗುರುಪ್ರಸಾದ್ ಎಂಬ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎಂದು ಹೇಳಲಾಗಿದೆ.
 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا