Urdu   /   English   /   Nawayathi

ಚುನಾವಣಾಧಿಕಾರಿಗಳ ಎಡವಟ್ಟಿನಿಂದ ಮತದಾರರು ಗೊಂದಲದಲ್ಲಿದ್ದಾರೆ: ತನ್ವೀರ್​​ ಸೇಠ್​​ ಆರೋಪ

share with us

ಮೈಸೂರು: 11 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಚುನಾವಣಾಧಿಕಾರಿಗಳು ಮಾಡಿದ ಎಡವಟ್ಟಿನಿಂದ ಎನ್.ಆರ್. ಕ್ಷೇತ್ರದ ಮತದಾರರು ಗೊಂದಲದಲ್ಲಿದ್ದಾರೆ ಎಂದು ಶಾಸಕ ತನ್ವೀರ್ ಸೇಠ್ ಆರೋಪಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಾಡ್೯ಗಳಲ್ಲಿ ಮತದಾನ ಪಟ್ಟಿಯಿಂದ ಮತದಾರರ ಹೆಸರನ್ನು ಅದಲು ಬದಲು ಮಾಡಿರುವುದರಿಂದ ಅನೇಕ ಮತಗಟ್ಟೆ ಕೇಂದ್ರಗಳಲ್ಲಿ ಮತದಾರರು ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದರು. ಮತದಾರರ ಗುರುತಿನ ಚೀಟಿಯನ್ನು ನೀಡುವ ಕೆಲಸವನ್ನು ರಾಜಕೀಯ ಪಕ್ಷಗಳಿಗೆ ನೀಡಬಾರದು. ಚುನಾವಣಾ ಆಯೋಗವೇ ಮತದಾರರಿಗೆ ಗುರುತಿನ ಚೀಟಿ ನೀಡುವ ವ್ಯವಸ್ಥೆ ಮಾಡಬೇಕು. ಒಂದು ಕಡೆ ಮತದಾನ ಜಾಗೃತಿ ಮಾಡುತ್ತಾರೆ. ಮತ್ತೊಂದೆ ಕಡೆ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا