Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಅಮೃತಸರ್: 13 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಪಂಜಾಬಿನ ಅಮೃತಸರ್ ಜಲಿಯನ್ ವಾಲಾಭಾಗ್ ಹತ್ಯಾಕಾಂಡ ನಡೆದು ಇಂದಿಗೆ 100 ವರ್ಷಗಳಾಗುತ್ತಿದೆ.1919ರ ಏಪ್ರಿಲ್ 13ರಂದು ಬ್ರಿಟೀಷರು ಭಾರತೀಯರ ಮೇಲೆ ನಡೆಸಿದ ಅಮಾನವೀಯ ಹೇಯ ದಾಳಿಗೆ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ 1500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಶತಮಾನವೇ ಕಳೆದರೂ ಬಾರತೀಯರ ನೆನಪಲ್ಲಿ ಇದು ಮಾಸದ ಕಪ್ಪುಚುಕ್ಕಿಯಾಗಿ ಉಳಿದಿದೆ. ಜಲಿಯನ್ ವಾಲಾಭಾಗ್ ಹತ್ಯಾಕಾಂಡಕ್ಕೆ ನೂರು ವರ್ಷವಾಗಿರುವ ಹಿಇನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಟ್ವಿಟ್ಟರ್ ಮೂಲಕ ಮೃತರಿಗೆ ಗೌರವ ಸೂಚಿಸಿದ್ದಾರೆ.
President of India✔@rashtrapatibhvn
A 100 years ago today, our beloved freedom fighters were martyred at Jallianwala Bagh. A horrific massacre, a stain on civilisation, that day of sacrifice can never be forgotten by India. At this solemn moment, we pay our tribute to the immortals of Jallianwala #PresidentKovind
909 people are talking about this
"ಇಂದು 100 ವರ್ಷಗಳ ಹಿಂದೆ, ನಮ್ಮ ಪ್ರೀತಿಯ ಸ್ವಾತಂತ್ರ್ಯ ಯೋಧರು ಜಲಿಯನ್ ವಾಲಾಭಾಗ್ ನಲ್ಲಿ ಹುತಾತ್ಮರಾಗಿದ್ದರು, ಒಂದು ಭೀಕರವಾದ ಹತ್ಯಾಕಾಂಡ, ನಾಗರಿಕತೆಯ ಪಾಲಿಗೆ ಕೆಟ್ಟ ದೆಇನ ಅದಾಗಿತ್ತು. ಆ ದಿನದ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಅಂದಿನ ಗಂಬೀರ ದಾಳಿಯಲ್ಲಿ ಸಾವನ್ನಪ್ಪಿದ ಎಲ್ಲರಿಗೆ ನಮ್ಮ ನಮನಗಳು" ರಾಷ್ಟ್ರಪತಿ ಕೋವಿಂದ್ ಟ್ವೀಟ್ ಮಾಡಿದ್ದಾರೆ.
Chowkidar Narendra Modi✔@narendramodi
Today, when we observe 100 years of the horrific Jallianwala Bagh massacre, India pays tributes to all those martyred on that fateful day. Their valour and sacrifice will never be forgotten. Their memory inspires us to work even harder to build an India they would be proud of.
7,537 people are talking about this
"ಇಂದು 100 ವರ್ಷಗಳ ಹಿಂದೆ ಭಯಾನಕ ಜಲಿಯನ್ ವಾಲಾಭಾಗ್ ಹತ್ಯಾಕಾಂಡ ನಡೆದ್ದೆ. ಆ ದಿನದಂದು ಹುತಾತ್ಮರಾದ ಎಲ್ಲರಿಗೆ ಭಾರತವು ಗೌರವವನ್ನು ನಿಡುತ್ತದೆ..ಅವರ ಶೌರ್ಯ ಮತ್ತು ತ್ಯಾಗವನ್ನು ಮರೆಯಲು ಸಾಧ್ಯವಿಲ್ಲ..ಅವರು ಭಾರತವನ್ನು ನಿರ್ಮಿಸಲು ಇನ್ನೂ ಕಷ್ಟಪಟ್ಟು ಕೆಲಸ ಮಾಡಲು ನಮಗೆ ಸ್ಫೂರ್ತಿ ನೀಡುತ್ತಾರೆ. ಆ ಹುತಾತ್ಮ ಸ್ವಾತಂತ್ರ ಯೋಧರ ಬಗೆಗೆ ಹೆಮ್ಮೆ ಇದೆ" ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜಲಿಯನ್ ವಾಲಾಭಾಗ್ ರಾಷ್ಟ್ರೀಯ ಸ್ಮಾರಕಕ್ಕೆ ಭೇಟಿ ನಿಡಿ ಗೌರವ ಸಲ್ಲಿಸಿದರು
Congress President Rahul Gandhi lays wreath at #JallianwalaBagh memorial on commemoration of 100 years of the massacre. Punjab CM Captain Amarinder Singh and state minister Navjot Singh Sidhu also present. #JallianwalaBaghCentenary
107 people are talking about this
ಭಾರತದ ಬ್ರಿಟಿಷ್ ಹೈ ಕಮಿಷನರ್ ಭಾರತಕ್ಕೆ ಸರ್ ಡೊಮಿನಿಕ್ ಅಸ್ಕ್ವಿತ್ ಸಹ ಜಲಿಯನ್ ವಾಲಾಭಾಗ್ ಸ್ಮಾಅಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದ್ದಾರೆ.ಅಲ್ಲದೆ ಅಲ್ಲಿನ ಸಂದೇಶ ಪುಸ್ತಕದಲ್ಲಿ ಸಂದೇಶವನ್ನು ಬರೆದು , "100 ವರ್ಷಗಳ ಹಿಂದೆ ಜಲಿಯನ್ ವಾಲಾಬಾಗ್ ನಲ್ಲಿ ನಡೆದ ಘಟನೆ ಬ್ರಿಟಿಷ್-ಭಾರತೀಯ ಇತಿಹಾಸದಲ್ಲಿ ಅವಮಾನಕರವಾದ ಘಟನೆಯಾಗಿ ಉಳಿದಿದೆ. ಅಂದು ನಡೆದ ಆ ಘೋರ ದುರಂತಕ್ಕಾಗಿ ನಾವು ವಿಷಾದಿಸುತ್ತೇವೆ. 21 ನೇ ಶತಮಾನದಲ್ಲಿ ಭಾರತ ಅಭಿವೃದ್ದಿಯತ್ತ ಸಾಗುತ್ತಿದ್ದು ಯುಕೆ ಮತ್ತು ಭಾರತವು ಅಭಿವೃದ್ದಿಗಾಗಿ ಸಹಭಾಗಿತ್ವದ ಕುರಿತು ಬದ್ದತೆ ಪ್ರದರ್ಶಿಸುತ್ತಿರುವುದಕ್ಕೆ ನನಗೆ ಸಂತಸವಿದೆ" ಎಂದಿದ್ದಾರೆ.
Amritsar: British High Commissioner to India Sir Dominic Asquith lays wreath at #JalianwalaBagh memorial on commemoration of 100 years of the massacre. #Punjab
74 people are talking about this
ಬ್ರಿಟಿಷ್ ಪ್ರಧಾನಿ ತೆರೇಸಾ ಮೇ ಬ್ರಿಟಿಷ್ ಸಂಸತ್ತಿನಲ್ಲಿ ಈ ವಾರದ ಪ್ರಾರಂಭದ ದಿನ "1919 ರಲ್ಲಿ ಜಲಿಯನ್ ವಾಲಾಭಾಗ್ ದುರಂತವು ಬ್ರಿಟಿಷ್ ಭಾರತೀಯ ಇತಿಹಾಸದಲ್ಲೇ ಅಪಮಾನಕರ, ಇದೊಂದು ಮಾಸದ ಗಾಯವಾಗಿದೆ" ಎಂದು ಹೇಳಿದ್ದರು. ಅದೇ ವೇಳೆ, ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಮಧ್ಯಾಹ್ನ ಅಮೃತಸರ್ ಗೆ ಆಗಮಿಸಲಿದ್ದು ಶತಮಾನದ ಘಟನೆ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |