Urdu   /   English   /   Nawayathi

ಬಾಂಬ್ ಕಟ್ಟಿ ರಾಹುಲ್ ಗಾಂಧಿಯನ್ನು ಶತ್ರು ರಾಷ್ಟ್ರದಲ್ಲಿ ಉಡಾಯಿಸಬೇಕಿತ್ತು: ಪಂಕಜಾ ಮುಂಡೆ

share with us

ಮುಂಬೈ: 23 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದ ಬಾಲಾಕೋಟ್ ಮೇಲೆ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೂ ಬಾಂಬ್ ಜೊತೆ ಕಟ್ಟಿ ಉಡಾಯಿಸಬೇಕಿತ್ತು ಎಂದು ಬಿಜೆಪಿ ನಾಯಕ ಪಂಕಜಾ ಮುಂಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರ ಸೊಂಟಕ್ಕೆ ಬಾಂಬ್ ಕಟ್ಟಿ ಶತ್ರು ನೆಲದಲ್ಲಿ ಉಡಾಯಿಸಬೇಕಿತ್ತು. ಆದ ವಾಯುದಾಳಿ ಕುರಿತು ಸಾಕ್ಷ್ಯ ಕೇಳುತ್ತಿರುವವರಿಗೆ ಸಮಾಧಾನವಾಗುತ್ತಿತ್ತು ಎಂದು ಪಂಕಜಾ ಮುಂಡೆ ಹೇಳಿದ್ದಾರೆ. ಜಲ್ನಾ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಪಂಕಜಾ ಮುಂಡೆ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಪಂಕಜಾ ಮುಂಡೆ ಅವರ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿರುವ ಕಾಂಗ್ರೆಸ್, ಸಚಿವರು ರಾಜಕೀಯ ಆರೋಪ ಪ್ರತ್ಯಾರೋಪಗಳ ಘನತೆಯನ್ನೂ ಕುಂದಿಸಿದ್ದಾರೆ ಎಂದು ಹರಿಹಾಯ್ದಿದೆ.

View image on Twitter

ANI✔@ANI

Maharashtra Min Pankaja Munde:We did surgical strike after cowardly attack on our soldiers.Some ppl ask what was surgical strike&what's the evidence?I say we should've attached a bomb to Rahul Gandhi&should have sent him to another country. Then they would have understood.(21.04)

1,518

4:52 PM - Apr 22, 2019

550 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا