Urdu   /   English   /   Nawayathi

ಮತಗಟ್ಟೆಯಲ್ಲಿ ಗೊಂದಲ ಸೃಷ್ಟಿಸಿದ ಬಿಜೆಪಿ ಕಾರ್ಯಕರ್ತರು: ಲಾಠಿ ರುಚಿ ತೊರಿಸಿದ ಖಾಕಿಪಡೆ...!

share with us

ಬೀದರ್: 23 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಮತಗಟ್ಟೆಯಲ್ಲಿ ಅನಗತ್ಯವಾಗಿ ತುಂಬಿಕೊಂಡು ಗೊಂದಲ ಸೃಷ್ಟಿಸಿದ್ದ ಬಿಜೆಪಿ ಕಾರ್ಯಕರ್ತರಿಗೆ ಅನಿವಾರ್ಯವಾಗಿ ಪೊಲೀಸರು ಲಾಠಿ ರುಚಿ ತೊರಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿ ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಗೊಂದಲ ಸೃಷ್ಟಿಸಿದ್ದರು. ಇದನ್ನು ಗಮನಿಸಿದ ಪೊಲೀಸರು ಸ್ಥಳದಿಂದ ದೂರ ಹೊಗುವಂತೆ ಮನವಿ ಮಾಡಿಕೊಂಡರು. ಆದ್ರೆ ಬಿಜೆಪಿ ಕಾರ್ಯಕರ್ತರು ಪೊಲೀಸರ ಮಾತಿಗೆ ಕ್ಯಾರೆ ಎನ್ನದೆ ತಮ್ಮ ವರ್ತನೆಯನ್ನು ಮುಂದುವರೆಸಿದರು. ಅಷ್ಟೇ ಅಲ್ಲದೇ ದೂರದಿಂದ ನಿಂತು ಪೊಲೀಸರ ಮೇಲೆಯೇ ಕಲ್ಲು ಎಸೆಯಲಾರಂಭಿಸಿದರು. ಈ ವೇಳೆ ಪಿಎಸ್​ಐ ಬಾಸುಮಿಯ್ಯಾ ಸೇರಿದಂತೆ ಪೊಲೀಸರ ತಂಡ, ಗುಂಪು ಚದುರಿಸಲು ಲಾಠಿ ರುಚಿ ತೊರಿಸಿದ್ದಾರೆ. ಆದ್ರೆ ಪೊಲೀಸರು ಅನಗತ್ಯವಾಗಿ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا