Urdu   /   English   /   Nawayathi

2 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ದಾಳಿ: ಅಧಿಕಾರಿ ಬಲೆಗೆ

share with us

ಕೊಪ್ಪಳ: 30 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ಆಹಾರ ಸಂರಕ್ಷಣಾಧಿಕಾರಿ ಡಾ.ಎಂ.ಎಂ.ಕಟ್ಟಿಮನಿ 2 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೂಕನಪಳ್ಳಿಯ ಬಸಪ್ಪ ಗುಳದಳ್ಳಿ ಎಂಬುವರು ಕ್ಯಾಟರಿಂಗ್ ವ್ಯಾಪಾರಕ್ಕಾಗಿ ಪರವಾನಗಿ ಬಯಸಿ ಅರ್ಜಿ ಸಲ್ಲಿಸಿದ್ದರು. ಆದರೆ ಕಟ್ಟಿಮನಿ ಅವರು ಕೆಲಸ ಮಾಡಿಕೊಡಲು ₹ 2 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಸಪ್ಪ ಅವರು ಹಣ ನೀಡುವ ಮುಂದೆ ದಾಳಿ ನಡೆಸಿದ ಎಸಿಬಿ ಅಧಿಕಾರಿ ರುದ್ರೇಶ ಉಜ್ಜನಕೊಪ್ಪ ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಎಸಿಬಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರ, ವಾ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا