Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 02 ಮೇ (ಫಿಕ್ರೋಖಬರ್ ಸುದ್ದಿ) ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡು ಅಪಹರಣ ಮಾಡಿ ದರೋಡೆ ನಡೆಸಿದ್ದ ಅಂತಾರಾಜ್ಯ ಆರೋಪಿಗಳನ್ನ ಬಂಧಿಸುವಲ್ಲಿ ಸಿಲಿಕಾನ್ ಸಿಟಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋರಮಂಗಲದ ವ್ಯಕ್ತಿವೋರ್ವನ ಮನೆಗೆ ನುಗ್ಗಿ ದರೋಡೆ ಮತ್ತು ಕಿಡ್ನಾಪ್ ಮಾಡಿ ಪರಾರಿಯಾಗಿದ್ದ ಆರೋಪಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಆಗ್ನೇಯ ವಿಭಾಗದ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ಎಪ್ರಿಲ್ 22 ರ ರಾತ್ರಿ ಕೋರಮಂಗಲದ ಮಧು ಎಂಬುವರ ಮನೆಗೆ ನುಗ್ಗಿ ಆತನನ್ನು ಹಿಗ್ಗಾಮುಗ್ಗ ಥಳಿಸಿದ್ದರು. ಅಲ್ಲದೆ, ಮನೆಯಲ್ಲಿದ್ದ ಮೊಬೈಲ್ ಪೋನ್, ಲ್ಯಾಪ್ ಟಾಪ್ ಮತ್ತು ನಗದು ಹಣ ಸುಲಿಗೆ ಮಾಡಿ ನಂತರ ಮಧುವನ್ನ ಕಿಡ್ನಾಪ್ ಮಾಡಿದ್ದರು. ಈ ವೇಳೆ ಕೆ.ಆರ್. ಪುರಂ ಅವಲಹಳ್ಳಿ ಮಾರ್ಗ ಮಧ್ಯೆ ಎಟಿಎಂ ಕಾರ್ಡ್ ನಿಂದ ಹಣ ಡ್ರಾ ಮಾಡುವಂತೆ ಬೆದರಿಸಿದ್ದರು. ಇದಕ್ಕೆ ನಿರಾಕರಿಸಿದ್ದ ಮಧು ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಮುಳ್ಳು ತಂತಿಯ ಮೇಲೆ ಎಸೆದು ಹೋಗಿದ್ದರು. ನಂತರ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ರು. ಈ ಘಟನೆ ಕುರಿತು ಮಧು ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಈ ಹಿನ್ನೆಲೆ ಆಸ್ಪತ್ರೆಯವರೇ ಕೋರಮಂಗಲ ಠಾಣೆಗೆ ವಿಚಾರ ತಿಳಿಸಿದ್ರು. ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡ ಆಗ್ನೇಯ ವಿಭಾಗ ಡಿಸಿಪಿ ಇಶಾಪಂತ್, ಮಡಿವಾಳ ಎಸಿಪಿ ಸೋಮೆಗೌಡ , ಕೋರಮಂಗಲ ಇನ್ಸಪೆಕ್ಟರ್ ಪ್ರಶಾಂತ್ ವಿಶೇಷ ತಂಡ ರಚನೆ ಮಾಡಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ನಿಕುಲ್ ಬಿ.ಎಸ್ ಅಲಿಯಾಸ್ ಬೆನ್ನಿ, ಸ್ಟೀಪನ್ ರಾಜ್ ಅಲಿಯಾಸ್ ಸ್ಟೀವನ್, ವೇಣು ಮಾದವ್ ಬಂಧಿತರು. ಆರೋಪಿಗಳನ್ನ ವಿಚಾರಣೆ ನಡೆಸಿದಾಗ ಇನ್ನೂ ಕೆಲವರು ಈ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದರ ಜೊತೆಗೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆಯಂತೆ. ಈ ಪ್ರಕರಣವನ್ನು ಭೇದಿಸಿಗಾದ ಪ್ರೇಮ್ ಮಹದೇವ್ ಮತ್ತು ಅನುಘೋಷ್, ರಾಹುಲ್ ಎಂಬುವರನ್ನ ಬಂಧಿಸಿದ್ದಾರೆ. ಅರೋಪಿಗಳಿಂದ ಬರೋಬ್ಬರಿ 5 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಅರೋಪಿಗಳನ್ನ ವಿಚಾರಣೆ ನಡೆಸಿದಾಗ ಸಾಫ್ಟ್ವೇರ್ ಇಂಜಿನಿಯರ್ಸ್ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರಿಂದ ಪೊಲೀಸರು ನಗದು, ಕಾರ್ ವಶಪಡಿಸಿಕೊಂಡಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |