Urdu   /   English   /   Nawayathi

ಮೋದಿ ಬಾಯಿತಪ್ಪಿ ಹೇಳಿದ ಮಾತಲ್ಲ ಇದು... ಅರಿವಿದ್ದೇ ಮಾಡಿದ ಆರೋಪವಿದು...!

share with us

ರಾಂಚಿ: 07 ಮೇ (ಫಿಕ್ರೋಖಬರ್ ಸುದ್ದಿ) ಪ್ರಧಾನಿ ನರೇಂದ್ರ ಮೋದಿ ಮೊತ್ತೊಮ್ಮೆ ಮಾಜಿ ಪ್ರಧಾನಿ ರಾಜೀವ್​ ಗಾಂಧಿ ವಿರುದ್ಧ ಅವರ ಹೆಸರು ಹೇಳದೇ ಹರಿಹಾಯ್ದಿದ್ದಾರೆ. ಮೊನ್ನೆಯಷ್ಟೇ ರಾಜೀವ್​ ಗಾಂಧಿ ಭ್ರಷ್ಟಾಚಾರದ ಆರೋಪ ಹೊತ್ತೇ ಮೃತಪಟ್ಟಿದ್ದರು ಎಂದು ಆರೋಪಿಸಿದ್ದರು. ಈ ಮಾತು ಪ್ರಧಾನಿ ಮೋದಿ ಅವರನ್ನ ಇಕ್ಕಟ್ಟಿಗೆ ಸಿಲುಕಿಸುತ್ತದೆ ಎಂದೇ ಎಲ್ಲ ಮಾಧ್ಯಮಗಳು ವಿಶ್ಲೇಷಣೆ ಮಾಡಿದ್ದವು. ಆದರೆ ಇಂದು ಜಾರ್ಖಂಡ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಮತ್ತೊಮ್ಮೆ ರಾಜೀವ್​ ಗಾಂಧಿ ಹಾಗೂ ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದು, ಇದು ಇಂದಿನ ಯುವ ಪೀಳಿಗೆಗೆ ಗೊತ್ತಾಗಲಿ. ಗಾಂಧಿ ಕುಟುಂಬ ದೇಶವನ್ನ ಹೇಗೆಲ್ಲ ಕೊಳ್ಳೆ ಹೊಡೆದಿದ್ದಾರೆ ಎನ್ನುವುದು ಗೊತ್ತಾಗಲಿ ಎಂದು ಹೇಳಿದ್ದಾರೆ. ರಾಜೀವ್​ ಗಾಂಧಿ ವಿರುದ್ಧ ಪ್ರಧಾನಿ ಮಾಡಿದ್ದ ಆರೋಪಕ್ಕೆ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ತೀವ್ರ ಪ್ರತ್ಯುತ್ತರ ಕೊಟ್ಟಿದ್ದರು. ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಪ್ರಧಾನಿ ಮಾತಿನ ಲಯ ತಪ್ಪುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಪ್ರಧಾನಿ ಈ ಮಾತು, ಸಂಕಷ್ಟಕ್ಕೆ ಸಿಲುಕಿಸುತ್ತದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿತ್ತು. ಆದರೆ, ಇದೇ ವಿಷಯವನ್ನ ಪ್ರಸ್ತಾಪಿಸಿರುವ ಮೋದಿ, ರಾಜೀವ್​ ಗಾಂಧಿ ಭ್ರಷ್ಟ ಎಂದಿದ್ದಕ್ಕೆ ಇಷ್ಟೊಂದು ಚೀರಾಟ ಹಾರಾಟ ಏಕೆ ಎಂದು ಪ್ರಶ್ನಿಸುವ ಮೂಲಕ ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ.

ಈ, ಇ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا